Saturday, September 21, 2024
spot_img
More

    Latest Posts

    ಕುಂದಾಪುರ ವ್ಯವಸಾಯ ಉತ್ಪನ್ನ ಸಹಕಾರಿ ಮಾರಾಟ ಸಂಘದ ನಿರ್ದೇಶಕ ಮಂಡಳಿಗೆ ಆಜ್ರಿ ರವಿ ಗಾಣಿಗ ಅವಿರೋಧ ಆಯ್ಕೆ

    ಬೆಂಗಳೂರು: ಕುಂದಾಪುರ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರಿ ಮಾರಾಟ ಸಂಘದ ನಿರ್ದೇಶಕ ಮಂಡಳಿಗೆ ಆಜ್ರಿ ರವಿ ಗಾಣಿಗ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.


    ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ರವಿ ಗಾಣಿಗ ಅವರೊಂದಿಗೆ ಎಸ್. ಜಯರಾಮ ಶೆಟ್ಟಿ ಬೆಳ್ವೆ, ಪ್ರಭಾಕರ ಶೆಟ್ಟಿ ಜಡ್ಕಲ್, ಎಚ್. ಹರಿಪ್ರಸಾದ್ ಶೆಟ್ಟಿ, ಎಸ್. ರಾಜು ಪೂಜಾರಿ, ಎಂ. ಮೋಹನ್ ದಾಸ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ, ಕೆ. ಭುಜಂಗ ಶೆಟ್ಟಿ, ಕೆ. ಸುಧಾಕರ ಶೆಟ್ಟಿ, ಆನಂದ ಬಿಲ್ಲವ, ಕೆ. ಮೋಹನ್ ಪೂಜಾರಿ, ಚಿತ್ತೂರು ಚಂದ್ರಶೇಖರ ಶೆಟ್ಟಿ, ಮೊಳಹಳ್ಳಿ ದೀನಪಾಲ ಶೆಟ್ಟಿ ಅವರು ಕೂಡ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಕುಂದಾಪುರ ಉಪ ವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಎಸ್.ವಿ. ಅರುಣ್ ಕುಮಾರ್ ಘೋಷಿಸಿದ್ದಾರೆ.

    ರವಿ ಗಾಣಿಗರು ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಹಾಗೂ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!