ಬೆಂಗಳೂರು: ಉಡುಪಿ ಜಿಲ್ಲಾ ಜನಪದ ಪರಿಷತ್ ಕೋಶಾಧಿಕಾರಿಯಾಗಿ ಶಿಕ್ಷಕ ಚಂದ್ರಶೇಖರ ಬೀಜಾಡಿ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕೋಟೇಶ್ವರ ಬೀಜಾಡಿಯ ‘ಮಿತ್ರ ಸಂಗಮ’ದ ಸ್ಥಾಪಕ ಸದಸ್ಯರಾಗಿರುವ ಇವರು, ಈ ಪ್ರದೇಶದ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಲೇ ಬಂದಿದ್ದಾರೆ. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಸಂಘಟನಾ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪುರ ಸುತ್ತಮುತ್ತಲ ವಿವಿಧ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಸಮಾರಂಭದ ಕಳೆ ಹೆಚ್ಚಿಸುವ ಮೂಲಕವೂ ಇವರು ಗುರುತಿಸಿಕೊಂಡಿದ್ದಾರೆ. ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಆಗಾಗ ತೊಡಗಿಸಿಕೊಳ್ಳುವ ಮುಖೇನ ಜನಮೆಚ್ಚುಗೆಗೂ ಪಾತ್ರರಾಗಿರುವ ಇವರು ಈಗ ಹೊಸ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿಭಾಯಿಸುವ ಸಾಮರ್ಥ್ಯ ಉಳ್ಳವರು.
ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಸದಸ್ಯರಾಗಿರುವ ಇವರು, ಪ್ರಸ್ತುತ ವಿಜಯ ಕರ್ನಾಟಕ ಪತ್ರಿಕೆಯ ಕೋಟ ಪ್ರದೇಶದ ವರದಿಗಾರಿಕೆಯನ್ನೂ ನಿಭಾಯಿಸುತ್ತಿದ್ದಾರೆ.