Saturday, June 1, 2024
spot_img
More

    Latest Posts

    ಡಿ.25ರಂದು ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್‌ನ ವಾರ್ಷಿಕ ಸಭೆ

    ಬೆಂಗಳೂರು: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್‌ನ 2019-20ನೇ ಸಾಲಿನ ವಾರ್ಷಿಕ ಸಭೆಯು ಡಿ. 25ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೊಂಡೆಕೊಪ್ಪ ಬೈಪಾಸ್ ಸರ್ಕಲ್ ಬಳಿ ಇರುವ ಗಾಣಿಗರ ಸಮುದಾಯ ಭವನದಲ್ಲಿ ನಡೆಯಲಿದೆ.

    ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ, ನಿವೃತ್ತ ಕೆಎಎಸ್ ಅಧಿಕಾರಿ ಆರ್. ನಾಗರಾಜ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಭೆ ನಡೆಯಲಿದ್ದು, ಟ್ರಸ್ಟ್‌ನ ಮಹಾಪೋಷಕರು ಹಾಗೂ ಪೋಷಕರು ಉಪಸ್ಥಿತರಿರಲಿದ್ದಾರೆ.

    ಇದೇ ಸಂದರ್ಭದಲ್ಲಿ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕೂಡ ಇರಲಿದೆ. ಬೆಳಗ್ಗೆ 11.30ರಿಂದ ನಡೆಯುವ ಈ ಕಾರ್ಯಕ್ರಮವನ್ನು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಬಿ.ಕೆ. ಬಸವರಾಜು ಉದ್ಘಾಟಿಸಲಿದ್ದಾರೆ. ಅಲ್ಲದೆ ಪ್ರಾಥಮಿಕ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಮಂಜುನಾಥ ಅವರು ಸಮಾಜದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ.

    ನಂತರ ಅಧ್ಯಕ್ಷರು-ಉಪಾಧ್ಯಕ್ಷರಿಂದ ಗಣ್ಯರಿಗೆ ಸನ್ಮಾನ ನಡೆಯಲಿದೆ. ಬಳಿಕ ನಿವೃತ್ತ ಪ್ರಾಂಶುಪಾಲ ಎಂ. ಪಾಪಣ್ಣ ಅವರು ಎಸ್‌ಎಸ್‌ಎಲ್‌ಸಿ- ಪಿಯುಸಿಯಲ್ಲಿ ಸಾಧನೆ ಮಾಡಿರುವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!