ಬೆಂಗಳೂರು: ಗಾಣಿಗ ಸಮಾಜದ ಇಬ್ಬರು ಗಣ್ಯರನ್ನು ಪತ್ರಿಕೆಯೊಂದು ಇತ್ತೀಚೆಗೆ ಬೆಂಗಳೂರಿನಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ. ಕರ್ನಾಟಕ ಸರ್ಕಾರದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಹಾಗೂ ಗಾಣಿಗ ಸಮಾಜದ ಮುಖಂಡರೂ ಆಗಿರುವ ಮಾಜಿ ಸಚಿವ ಶ್ರೀ ಬಿ.ಜೆ. ಪುಟ್ಟಸ್ವಾಮಿ ಮತ್ತು ತಿಪಟೂರು ನಗರಸಭೆ ನೂತನ ಅಧ್ಯಕ್ಷ ಪಿ.ಜೆ. ರಾಮಮೋಹನ್ ಅವರನ್ನು ‘ಸಿಂಹ ಧ್ವನಿ’ ಪತ್ರಿಕೆ ವತಿಯಿಂದ ಡಿ. 28ರಂದು ಬೆಂಗಳೂರಿನಲ್ಲಿ ಅಭಿನಂದಿಸಲಾಯಿತು. ಪತ್ರಿಕೆಯ ಸಂಪಾದಕ ಟಿ.ಡಿ. ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.