ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದ ಕುಲದೇವರು ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ಸನ್ನಿಧಿಯಲ್ಲಿ ಇರುವ ಶ್ರೀವೇಣುಗೋಪಾಲಕೃಷ್ಣ ಎಜುಕೇಷನಲ್ ಸೊಸೈಟಿ (ರಿ.) ವತಿಯಿಂದ ಇತ್ತೀಚೆಗೆ ಪ್ರತಿಭಾ ಪುರಸ್ಕಾರ ನೆರವೇರಿತು.
ಕುಲದೇವರ ಸನ್ನಿಧಾನದಲ್ಲಿರುವ ಶ್ರೀವೆಂಕಟೇಶ್ವರ ಸಭಾಭವನದಲ್ಲಿ ನವೆಂಬರ್ 28ರ ಶನಿವಾರ ‘ಪ್ರೇರಣ -2020’ ಸಮಾರಂಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಸಂಸ್ಥೆಯ ಹಿನ್ನೆಲೆ: ಶ್ರೀವೇಣುಗೋಪಾಲಕೃಷ್ಣ ಎಜುಕೇಷನಲ್ ಸೊಸೈಟಿಯು 1996ರಲ್ಲಿ ಸ್ಥಾಪನೆಗೊಂಡಿದ್ದು, ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಪ್ರಸ್ತುತ ಈ ಸೊಸೈಟಿಯ ಅಧ್ಯಕ್ಷರಾಗಿ ರಾಜೇಂದ್ರ ಗಾಣಿಗ, ಕಾರ್ಯದರ್ಶಿಯಾಗಿ ಗಣೇಶ ಚಲ್ಲೆಮಕ್ಕಿ, ಕೋಶಾಧಿಕಾರಿಯಾಗಿ ಸೂರ್ಯನಾರಾಯಣ ಗಾಣಿಗ ಹಾಗೂ ಜೊತೆ ಕಾರ್ಯದರ್ಶಿಯಾಗಿ ನಾರಾಯಣ ಎಚ್. ಐರೋಡಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.
ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಸಲುವಾಗಿ ಆರ್ಥಿಕ ನೆರವು ನೀಡಬೇಕಾದರೆ ತಮ್ಮೆಲ್ಲರ ಬೆಂಬಲ ಮತ್ತು ಸಹಾಯ ಅಗತ್ಯ. ಹಳ್ಳಿಗಳಲ್ಲಿರುವ ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ಸಹಾಯ ನೀಡಲು ಸಮಾಜ ಬಾಂಧವರು ತಮ್ಮೊಂದಿಗೆ ಕೈಜೋಡಿಸಬೇಕು ಎಂದು ಸೊಸೈಟಿ ವಿನಂತಿಸಿಕೊಂಡಿದೆ.