ಬೆಂಗಳೂರು: ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿ.ಸಿ.ಸಿ.) ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ಸುರೇಶ್ ಆರ್. ಸಜ್ಜನ ಅವರು ಆಯ್ಕೆ ಆಗಿದ್ದಾರೆ. ಯಾದಗಿರಿಯ ಸುರಪುರದ ರಂಗಂ ಪೇಟೆಯವರಾದ ಇವರು ಈ ಹಿಂದೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು.
ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಸಮಿತಿಯ ಸದಸ್ಯರಾಗಿದ್ದ ಇವರು, ಕಲಬುರಗಿ ಗಾಣಿಗ ಸಮಾಜದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಸುರಪುರ ಲಿಂಗಾಯತ ಸಮಾಜದ ಅಧ್ಯಕ್ಷ, ಸುರಪುರದ ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿರುವ ಇವರು ಪ್ರಸ್ತುತ ಅಖಿಲ ಭಾರತ ಗಾಣಿಗ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಆಗಿಯೂ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಇವರು 2018ರಲ್ಲಿ ಗ್ಲೋಬಲ್ ಪೀಸ್ ಯುನಿವರ್ಸಿಟಿಯ ಡಾಕ್ಟರೇಟ್ ಗೌರವಕ್ಕೂ ಪಾತ್ರರಾಗಿದ್ದಾರೆ. ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿ.ಸಿ.ಸಿ.) ಬ್ಯಾಂಕ್ ನೂತನ ಉಪಾಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗೆ ಸಮಾಜಬಾಂಧವರು ಭೇಟಿಯಾಗಿ ಸನ್ಮಾನಿಸಿದರು.