ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೀಡುವ ‘ಕನ್ನಡ ಸೇವಾ ರತ್ನ ಪ್ರಶಸ್ತಿ’ಗೆ ಸೀಕಲ್ ಸುಬ್ರಮಣಿ ಶೆಟ್ಟಿ ಅವರು ಆಯ್ಕೆ ಆಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಗಾಣಿಗ ಸಮಾಜದ ಸೇವಕರು ಹಾಗೂ ವಕೀಲರೂ ಆಗಿರುವ ಸೀಕಲ್ ಸುಬ್ರಮಣಿ ಶೆಟ್ಟಿ ಅವರಿಗೆ ಬೆಂಗಳೂರಿನ ಹಳೇ ಮದ್ರಾಸ್ ರಸ್ತೆಯಲ್ಲಿನ ಮೇಡಹಳ್ಳಿ ಕೋದಂಡರಾಮಸ್ವಾಮಿ ಸಮುದಾಯ ಭವನದಲ್ಲಿ ಜನವರಿ 23ರ ಶನಿವಾರ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಲಾಯಿತು.