ಬೆಂಗಳೂರು: ಗಾಣಿಗ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಮಾಜದ ಸಂಘ-ಸಂಸ್ಥೆಗಳು ಶೈಕ್ಷಣಿಕವಾಗಿ ಸಾಕಷ್ಟು ಸಹಾಯ ಮಾಡುತ್ತ ಪ್ರೋತ್ಸಾಹಿಸುತ್ತಲೇ ಬಂದಿದ್ದು, ಈ ಶೈಕ್ಷಣಿಕ ಕೈಂಕರ್ಯ ಮುಂದುವರಿಯುತ್ತಲೇ ಇದೆ. ಸಮಾಜಕ್ಕಾಗಿ ನಡೆಸುವ ಈ ಶೈಕ್ಷಣಿಕ ಸೇವೆಯ ಅಂಗವಾಗಿ ಬಾಗೇಪಲ್ಲಿ ತಾಲೂಕು ಗಾಣಿಗರ ಕ್ಷೇಮಾಭಿವೃದ್ಧಿ ಸಂಘವೂ ಕೈಜೋಡಿಸುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಪುರಸ್ಕರಿಸಿ ಹುರಿದುಂಬಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕು ಗಾಣಿಗರ ಕ್ಷೇಮಾಭಿವೃದ್ಧಿ ಸಂಘವು ಫೆಬ್ರವರಿ 7ರ ಭಾನುವಾರ ಬಾಗೇಪಲ್ಲಿಯ ಕೋರ್ಟ್ ಹಿಂಭಾಗದಲ್ಲಿರುವ ಗಾನಾ ಕಲ್ಯಾಣ ಮಂಟಪದಲ್ಲಿ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಎಸ್ಎಸ್ಎಲ್ಸಿ-ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿ ಪ್ರೋತ್ಸಾಹಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರದ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರು ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಗಾಣಿಗ ಎಜುಕೇಷನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕರೂ ಆಗಿರುವ ನಿವೃತ್ತ ಕೆಎಎಸ್ ಅಧಿಕಾರಿ ಆರ್. ನಾಗರಾಜ ಶೆಟ್ಟಿ, ಜ್ಯೋತಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಆರ್. ರಾಧಾಕೃಷ್ಣ ಮತ್ತಿತರರು ಉಪಸ್ಥಿತರಿದ್ದರು. ಬಾಗೇಪಲ್ಲಿ ತಾಲೂಕು ಗಾಣಿಗರ ಕ್ಷೇಮಾಭಿವೃದ್ಧಿ ಸಂಘ ಜಿ.ಎಂ. ರಾಮಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಂಬಂಧಿತ ಸುದ್ದಿ: ಗಾಣಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ, ಕ್ಯಾಲೆಂಡರ್ ಬಿಡುಗಡೆ
ಸಂಬಂಧಿತ ಸುದ್ದಿ: ಶ್ರೀವೇಣುಗೋಪಾಲಕೃಷ್ಣ ಎಜುಕೇಷನಲ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ
ಸಂಬಂಧಿತ ಸುದ್ದಿ: ಎಸ್ಜಿಇಸಿಟಿ ಮಹಾಸಭೆ, ನೂರಾರು ವಿದ್ಯಾರ್ಥಿಗಳಿಗೆ ಪುರಸ್ಕಾರ, ಸಾಧಕರಿಗೆ ‘ವಿದ್ಯಾಜ್ಯೋತಿ’ ಪ್ರಶಸ್ತಿ ಪ್ರದಾನ
ಸಂಬಂಧಿತ ಸುದ್ದಿ: ನಾಲ್ಕು ಜಿಲ್ಲೆಗಳ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ