ಬೆಂಗಳೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜೊತೆ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ ಅಚ್ಲಾಡಿ ಆಯ್ಕೆ ಆಗಿದ್ದಾರೆ. ರಾಜ್ಯದ ಮುಖ್ಯವಾಹಿನಿಯ ಹಾಗೂ ಕರಾವಳಿಯ ಮುಂಚೂಣಿಯ ದಿನಪತ್ರಿಕೆ ‘ಉದಯವಾಣಿ’ಯ ಬ್ರಹ್ಮಾವರ ತಾಲೂಕು ಗ್ರಾಮಾಂತರ ವರದಿಗಾರರಾಗಿ ರಾಜೇಶ್ ಕಾರ್ಯನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ ಜೊತೆಗೆ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಇವರು ಇತರ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿದ್ದಾರೆ. ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ (ರಿ.) ಇದರ ಪ್ರಧಾನ ಕಾರ್ಯದರ್ಶಿ, ಅಚ್ಲಾಡಿ ಸನ್ ಶೈನ್ ಗೆಳೆಯರ ಬಳಗದ ಅಧ್ಯಕ್ಷ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿಯೂ ಇವರು ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.