ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜ ಉಡುಪಿ ಇದರ ಅಧ್ಯಕ್ಷರಾಗಿ 24 ವರ್ಷಗಳ ಸುದೀರ್ಘ ಅವಧಿಗೆ ಜವಾಬ್ದಾರಿ ನಿಭಾಯಿಸಿರುವ ಕೆ.ಗೋಪಾಲ್ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.
ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಅನ್ನಪೂರ್ಣೇಶ್ವರಿ ಮಹಿಳಾ ಸಂಘದ ಎಂಟನೇ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿತು. ಇದೇ ಸಂದರ್ಭದಲ್ಲಿ ಅನ್ನಪೂರ್ಣೇಶ್ವರಿ ಮಹಿಳಾ ಸಂಘದ ವತಿಯಿಂದ ಕಿನ್ನಿಮೂಲ್ಕಿ ಗೋಪಾಲ್ ಮತ್ತು ವಸಂತಿ ಗೋಪಾಲ್ ದಂಪತಿಯನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಗೋಪಾಲ್ ಅವರು ಇಪ್ಪತ್ತನಾಲ್ಕು ವರ್ಷಗಳ ಕಾಲ ಉಡುಪಿ ಸೋಮಕ್ಷತ್ರಿಯ ಗಾಣಿಗ ಸಮಾಜದ ಮುಖ್ಯಸ್ಥರಾಗಿದ್ದು, ಹಲವಾರು ಸಾಮಾಜಿಕ-ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.