Saturday, September 21, 2024
spot_img
More

    Latest Posts

    ಶ್ರೀ ಲಕ್ಷ್ಮೀಂದ್ರ ತೀರ್ಥರಿಂದ ಮಾ.16ರಂದು ವ್ಯಾಸರಾಜ ಮಠದಲ್ಲಿ ಮುದ್ರಾಧಾರಣೆ- ಆಶೀರ್ವಚನ

    ಬೆಂಗಳೂರು: ಕುಂದಾಪುರ ಶ್ರೀವ್ಯಾಸರಾಜ ಮಠದ ಶ್ರೀಮದ್ ಶ್ರೀಲಕ್ಷ್ಮೀಂದ್ರ ತೀರ್ಥ ಶ್ರೀಪಾದಂಗಳವರು ಶಿರಸಿ ಯಲ್ಲಾಪುರ ರಸ್ತೆಯಲ್ಲಿರುವ ಕುಂದಾಪುರ ವ್ಯಾಸರಾಜ ಮಠಕ್ಕೆ ಮಾರ್ಚ್ 16ರಂದು ಆಗಮಿಸಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಅವರಿಂದ ಮುದ್ರಾಧಾರಣೆ ಹಾಗೂ ಆಶೀರ್ವಚನ ಇರಲಿದೆ.

    ಶಿರಸಿಯ ಗಾಣಿಗ ಸಮಾಜ ಅಭಿವೃದ್ಧಿ ಸಮಿತಿಯು ಈ ಕಾರ್ಯಕ್ರಮವನ್ನು ಶಿರಸಿ ಯಲ್ಲಾಪುರ ರಸ್ತೆಯಲ್ಲಿರುವ ಕುಂದಾಪುರ ವ್ಯಾಸರಾಜ ಮಠದ ಹುಲೇಕಲ್ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಏರ್ಪಡಿಸಿದ್ದು, ಸಮಾಜ ಬಾಂಧವರು ಇದರಲ್ಲಿ ಭಾಗಿಯಾಗಿ ಪೂಜ್ಯ ಸ್ವಾಮೀಜಿಯವರ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಸಂದರ್ಭದಲ್ಲಿ ವೈಯಕ್ತಿಕವಾಗಿ ಶ್ರೀಗಳ ಪಾದಪೂಜೆ ನಡೆಸಲು ಕೂಡ ಅವಕಾಶ ಇರಲಿದೆ.

    ಹುಲೇಕಲ್‌ನಲ್ಲಿರುವ ಕುಂದಾಪುರ ವ್ಯಾಸರಾಜ ಮಠಕ್ಕೆ ಶ್ರೀಲಕ್ಷ್ಮೀಂದ್ರ ತೀರ್ಥರು ಈ ಹಿಂದೆ ಬಂದಿದ್ದಾಗಿನ ದೃಶ್ಯ.

    ತೃತೀಯ ವರ್ಧಂತಿ ಉತ್ಸವ: ವ್ಯಾಸರಾಜ ಮಠದ ಆವರಣದಲ್ಲಿ ಶ್ರೀಗಳ ಅಮೃತಹಸ್ತದಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಅಮೃತಶಿಲೆಯ ಸಾಕ್ಷಿ ಗಣಪತಿ ದೇವಸ್ಥಾನದ ತೃತೀಯ ವರ್ಧಂತಿ ಉತ್ಸವ ಕೂಡ ಇದೇ ಸಂದರ್ಭದಲ್ಲಿ ನೆರವೇರಲಿದೆ. ಈ ಕಾರ್ಯಕ್ರಮವು ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರ ವರೆಗೆ ನಡೆಯಲಿದೆ ಎಂದು ಗಾಣಿಗ ಸಮಾಜ ಅಭಿವೃದ್ಧಿ ಸಮಿತಿ ತಿಳಿಸಿದೆ.

    ಸಮಿತಿ ನೇತೃತ್ವ: ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ ಪಿ. ಶೆಟ್ಟಿ, ಅಧ್ಯಕ್ಷ ಚಂದ್ರಶೇಖರ ಜಿ. ಶೆಟ್ಟಿ, ಕಾರ್ಯದರ್ಶಿ ರತ್ನಾಕರ ಪಿ. ಶೆಟ್ಟಿ ಹಾಗೂ ಟ್ರಸ್ಟಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಮಾಹಿತಿಗೆ ಮೊಬೈಲ್ ಫೋನ್ ಸಂಖ್ಯೆ 98452 99185, 82178 23191 ಸಂಪರ್ಕಿಸಬಹುದು.

    ಸಂಬಂಧಿತ ಸುದ್ದಿ: ಮತ್ತೆ ಗಾಣಿಗ ಸಮಾಜದ ಉಸ್ತುವಾರಿಯಲ್ಲಿ ವ್ಯಾಸರಾಜ ಮಠ 

    ಸಂಬಂಧಿತ ಸುದ್ದಿ: ಗಾಣಿಗ ಸಮಾಜ ಅಭಿವೃದ್ಧಿ ಸಮಿತಿ ಮಹಾಸಭೆ, ಸಾಧಕರಿಗೆ ಸನ್ಮಾನ

    ಸಂಬಂಧಿತ ಸುದ್ದಿ: ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಇನ್ನೊಂದು ವಾರಪೂರ್ತಿ ಧಾರ್ಮಿಕ ಕಾರ್ಯಕ್ರಮ 

    ಸಂಬಂಧಿತ ಸುದ್ದಿ: ಜ. 17ರಂದು ಗಾಣಿಗ ಸಮಾಜ ಅಭಿವೃದ್ಧಿ ಸಮಿತಿ ವಾರ್ಷಿಕ ಮಹಾಸಭೆ 


    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!