ಬೆಂಗಳೂರು: ಅತ್ಯಂತ ಕಿರಿಯ ನಿರ್ದೇಶಕರಲ್ಲಿ ಒಬ್ಬರು ಎಂದೇ ಹೆಸರಾಗಿರುವ, ಅದೂ ತನ್ನ ಮೊದಲ ಸಿನಿಮಾದಲ್ಲೇ ರೆಬೆಲ್ ಸ್ಟಾರ್ ಅಂಬರೀಷ್, ಕಿಚ್ಚ ಸುದೀಪ್, ಸುಹಾಸಿನಿ ಮುಂತಾದವರಿಗೆ ಆ್ಯಕ್ಷನ್-ಕಟ್ ಹೇಳಿ ಸೈ ಎನಿಸಿಕೊಂಡಿರುವ ನಿರ್ದೇಶಕ ಗುರುದತ್ತ ಗಾಣಿಗ ಈಗಾಗಲೇ ತಮ್ಮ ನಿರ್ದೇಶನದ ಎರಡನೇ ಸಿನಿಮಾಗೆ ಸಿದ್ಧರಾಗಿದ್ದಾರೆ. ವಿಶೇಷವೆಂದರೆ ಅವರು ತಮ್ಮ ನಿರ್ದೇಶನದ ಎರಡನೇ ಚಿತ್ರದ ಶೀರ್ಷಿಕೆಯನ್ನು ಜುಲೈ 4ರಂದು ಬಿಡುಗಡೆ ಮಾಡಲಿದ್ದಾರೆ.
ಎರಡನೇ ಪ್ರಯತ್ನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖ ತಾರಾಗಣದಲ್ಲಿರುವ ಸಿನಿಮಾಗೆ ನಿರ್ದೇಶನ ಮಾಡಲಿರುವ ಗುರುದತ್ತ ಗಾಣಿಗ, ಇದೇ ಜುಲೈ 4ರಂದು ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಅನಾವರಣ ಮಾಡಲಿದ್ದಾರೆ. ಅಂದು ತಮ್ಮ ಚಿತ್ರದ ನಾಯಕ ಪ್ರಜ್ವಲ್ ದೇವರಾಜ್ ಅವರ ಜನ್ಮದಿನವಾಗಿರುವುದರಿಂದ ಚಿತ್ರತಂಡ ಅದೇ ದಿನ ಸಿನಿಮಾ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಿದೆ. ಸದ್ಯಕ್ಕೆ ಪಿಡಿ35 ಎಂಬ ತಾತ್ಕಾಲಿಕ ಶೀರ್ಷಿಕೆಯೊಂದಿಗೆ ಈ ಚಿತ್ರದ ಚಟುವಟಿಕೆಗಳು ನಡೆಯುತ್ತಿವೆ.
ಮಾನವ ಕಳ್ಳಸಾಗಣಿಕೆಯ ಕಥೆಯ ಎಳೆಯನ್ನು ಆಧರಿಸಿ ಈ ಸಿನಿಮಾದ ಕಥಾಹಂದರ ಸೃಷ್ಟಿಸಲಾಗಿದ್ದು, ಚಿತ್ರಕಥೆಯು 1999ರ ಕಾಲಘಟ್ಟದಿಂದ 2009ರ ವರೆಗೆ ಸಾಗಲಿದೆ ಎನ್ನಲಾಗಿದೆ. ಬೆಂಗಳೂರು ಕುಮಾರ್ (ಕುಮಾರ್ ಬಿ.) ಈ ಸಿನಿಮಾದ ನಿರ್ಮಾಪಕರಾಗಿದ್ದು, ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಹಾಗೂ ಮಾಸ್ತಿ ಅವರ ಸಂಭಾಷಣೆ ಇರಲಿದೆ.
ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.
ವಿಶ್ವ ಯೋಗ ದಿನದಂದೇ ನಿಮಗಿದೋ ಕೇಳುವ ಯೋಗ; ಕಣಗಾಲರ ‘ಮಾನಸ ಸರೋವರ’ ಕೇಳಿಸಲಿದ್ದಾರೆ ಡಾವೆಂಕಿ
ಬೇವು-ಬೆಲ್ಲದ ಜೊತೆ ಮನ(ನು)ರಂಜಿಸಿದ ಟೀಸರ್