Saturday, September 21, 2024
spot_img
More

    Latest Posts

    ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವಾರ್ಷಿಕ ವರ್ಧಂತ್ಯುತ್ಸವ ನಡೆಯುತ್ತಿದೆ. ಶ್ರೀವೇಣುಗೋಪಾಲಕೃಷ್ಣ ದೇವರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುತ್ತಿರುವ ಈ ವರ್ಧಂತ್ಯುತ್ಸವ ಇಂದು ಬೆಳಗ್ಗೆ 8.30ಕ್ಕೆ ಆರಂಭಗೊಂಡಿದೆ.

    ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ ದಂಪತಿ ಈ ವರ್ಧಂತ್ಯುತ್ಸವದ ಸಂಕಲ್ಪ ಕೈಗೊಂಡಿದ್ದು, ವೇದಮೂರ್ತಿ ಶ್ರೀಕಾಂತ್ ಸಾಮಗ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗುತ್ತಿದೆ. ವರ್ಧಂತ್ಯುತ್ಸವದ ಪ್ರಯುಕ್ತ ನವ ಕಲಶ ಪ್ರಧಾನ ಹೋಮ, ಆಶ್ಲೇಷಾ ಬಲಿ ಇನ್ನಿತರ ಕಾರ್ಯಕ್ರಮಗಳು ವಿಧ್ಯುಕ್ತವಾಗಿ ನೆರವೇರಲಿವೆ.

    ವಾಸುದೇವ ಬೈಕಾಡಿ ದಂಪತಿಯಿಂದ ಸಂಕಲ್ಪ

    ಸಂಬಂಧಿತ ಸುದ್ದಿ: ಬಾರ್ಕೂರು ಗಾಣಿಗ ಸಂಘದ ಅಧ್ಯಕ್ಷರಾಗಿ ವಾಸುದೇವ ಬೈಕಾಡಿ ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಪುನರಾರಂಭ

    ಸಂಬಂಧಿತ ಸುದ್ದಿ: ತಿರುಪತಿ ವೆಂಕಟೇಶ್ವರನಾಗಿ ಕಂಗೊಳಿಸಿದ ಬಾರ್ಕೂರು ವೇಣುಗೋಪಾಲಕೃಷ್ಣ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!