ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವಾರ್ಷಿಕ ವರ್ಧಂತ್ಯುತ್ಸವ ನಡೆಯುತ್ತಿದೆ. ಶ್ರೀವೇಣುಗೋಪಾಲಕೃಷ್ಣ ದೇವರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುತ್ತಿರುವ ಈ ವರ್ಧಂತ್ಯುತ್ಸವ ಇಂದು ಬೆಳಗ್ಗೆ 8.30ಕ್ಕೆ ಆರಂಭಗೊಂಡಿದೆ.
ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ ದಂಪತಿ ಈ ವರ್ಧಂತ್ಯುತ್ಸವದ ಸಂಕಲ್ಪ ಕೈಗೊಂಡಿದ್ದು, ವೇದಮೂರ್ತಿ ಶ್ರೀಕಾಂತ್ ಸಾಮಗ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗುತ್ತಿದೆ. ವರ್ಧಂತ್ಯುತ್ಸವದ ಪ್ರಯುಕ್ತ ನವ ಕಲಶ ಪ್ರಧಾನ ಹೋಮ, ಆಶ್ಲೇಷಾ ಬಲಿ ಇನ್ನಿತರ ಕಾರ್ಯಕ್ರಮಗಳು ವಿಧ್ಯುಕ್ತವಾಗಿ ನೆರವೇರಲಿವೆ.
ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ವರ್ಧಂತ್ಯುತ್ಸವದ ದೃಶ್ಯ.
— Global Ganiga (@GlobalGaniga) July 13, 2021
ಗಾಣಿಗ ಸಮಾಜದ ಮತ್ತಷ್ಟು ಸುದ್ದಿಗಳಿಗಾಗಿ https://t.co/BoNAvzKFDQ ನೋಡಿ.#GlobalGaniga pic.twitter.com/Eyph1vaPpY
ವಾಸುದೇವ ಬೈಕಾಡಿ ದಂಪತಿಯಿಂದ ಸಂಕಲ್ಪ
ಸಂಬಂಧಿತ ಸುದ್ದಿ: ಬಾರ್ಕೂರು ಗಾಣಿಗ ಸಂಘದ ಅಧ್ಯಕ್ಷರಾಗಿ ವಾಸುದೇವ ಬೈಕಾಡಿ ಅವಿರೋಧ ಆಯ್ಕೆ
ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಪುನರಾರಂಭ
ಸಂಬಂಧಿತ ಸುದ್ದಿ: ತಿರುಪತಿ ವೆಂಕಟೇಶ್ವರನಾಗಿ ಕಂಗೊಳಿಸಿದ ಬಾರ್ಕೂರು ವೇಣುಗೋಪಾಲಕೃಷ್ಣ