Saturday, September 21, 2024
spot_img
More

    Latest Posts

    ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಳದಲ್ಲಿ ವರಮಹಾಲಕ್ಷ್ಮೀಪೂಜೆ, ಋಗುಪಾಕರ್ಮ ಆಚರಣೆ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾಗಿರುವ ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಋಗುಪಾಕರ್ಮ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನೆರವೇರಿದವು.

    ಆಗಸ್ಟ್ 20ರ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ಹಾಗೂ ಆಗಸ್ಟ್​ 21ರ ಶನಿವಾರ ಋಗುಪಾಕರ್ಮ ಕಾರ್ಯಕ್ರಮಗಳು ಸಮಾಜಬಾಂಧವರ ಸಮ್ಮುಖದಲ್ಲಿ ಸಾಂಗವಾಗಿ ನೆರವೇರಿದವು.

    ವರಮಹಾಲಕ್ಷ್ಮೀ ಪೂಜೆಯಲ್ಲಿ ಸಮಾಜದ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರೆ, ಋಗುಪಾಕರ್ಮ ಆಚರಣೆಯಲ್ಲಿ ಸಮಾಜದ ಯುವಕರು-ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಜ್ಞೋಪವೀತಧಾರಣೆಗೆ ಪಾತ್ರರಾದರು.

    ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ
    ಪೂಜಾನಿರತ ಅರ್ಚಕರು
    ಪೂಜೆಯಲ್ಲಿ ಸಮಾಜದ ಪರವಾಗಿ ಭಾಗವಹಿಸಿದ ಬಾರ್ಕೂರು ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ ದಂಪತಿ
    ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಸೋಮಕ್ಷತ್ರಿಯ ಗಾಣಿಗ ಸಮಾಜದ ಸುಮಂಗಲಿಯರು
    ಋಗುಪಾಕರ್ಮ ಪ್ರಯುಕ್ತ ನಡೆದ ಹೋಮ
    ಯಜ್ಞೋಪವೀತಧಾರಣೆಯಲ್ಲಿ ನಿರತ ಸಮಾಜಬಾಂಧವರು
    ಯಜ್ಞೋಪವೀತಧಾರಣೆಯಲ್ಲಿ ಪಾಲ್ಗೊಂಡ ಸಮಾಜಬಾಂಧವರು

    ಸಂಬಂಧಿತ ಸುದ್ದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಬಾರ್ಕೂರು ದೇವಳದಲ್ಲಿ ಧ್ವಜಾರೋಹಣ, ಶ್ರಮದಾನ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಪುನರಾರಂಭ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!