ಬೆಂಗಳೂರು: ಶೇಖರ ಗಾಣಿಗ ಅವರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿರುವ ಇವರು ಉಡುಪಿ ಜಿಲ್ಲೆಯ ಬೈಂದೂರು ವಲಯದ ಕಿಸ್ಮತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗುವ ಮೂಲಕ ಸಮಾಜಕ್ಕೆ ಹೆಮ್ಮೆ ತಂದಿರುವ ಇವರನ್ನು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ, ಶ್ರೀವ್ಯಾಸರಾಜ ಸೇವಾ ಟ್ರಸ್ಟ್ ಹಾಗೂ ತಾಲೂಕಿನ ಎಲ್ಲ ಗಾಣಿಗ ಯುವ ಮತ್ತು ಮಹಿಳಾ ಸಂಘಟನೆಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮಾತ್ರವಲ್ಲ ಇವರಿಂದ ಇನ್ನೂ ಹೆಚ್ಚಿನ ಸಾಧನೆ ಆಗುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
ಸಂಬಂಧಿತ ಸುದ್ದಿ: ಶಿಕ್ಷಕರ ದಿನಾಚರಣೆಯಂದು ಗಾಣಿಗ ಸಮುದಾಯದ ಶಿಕ್ಷಕರಿಗೆ ಸನ್ಮಾನ
ಸಂಬಂಧಿತ ಸುದ್ದಿ: ಕನ್ನಡ ಕಲಿಸುತ್ತಿರುವ ಸಮಾಜದ ಶಿಕ್ಷಕಿ; ಇದೊಂದು ‘ಆಶಾ’ದಾಯಕ ಬೆಳವಣಿಗೆ
ಸಂಬಂಧಿತ ಸುದ್ದಿ: ಕರಾಟೆಯಲ್ಲಿ ಸುಂಟರಗಾಳಿ ಎಬ್ಬಿಸಿದ ಶಶಾಂಕ್; ಟೊರ್ನಡೊ ಕಿಕ್ನಲ್ಲಿ ನೊಬೆಲ್ ವರ್ಲ್ಡ್ ರೆಕಾರ್ಡ್