ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಅತ್ತಾವರ ಶ್ರೀ ಚಕ್ರಪಾಣಿ ಗೋಪಿನಾಥ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಅನಿಲ್ಕುಮಾರ್ ಅತ್ತಾವರ ಅವರು ಆಯ್ಕೆ ಆಗಿದ್ದಾರೆ. ಕೈಕಂಬದ ಗುರುಪುರದಲ್ಲಿರುವ ಸಫಲ ಸೌಹಾರ್ದ ಸಹಕಾರಿ ನಿಯಮಿತ ಸಂಘದ ನಿರ್ದೇಶಕರಾಗಿಯೂ ಇವರು ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಅನಿಲ್ಕುಮಾರ್ ಅತ್ತಾವರ ಅವರು ಅತ್ತಾವರ ಶ್ರೀ ಚಕ್ರಪಾಣಿ ಗೋಪಿನಾಥ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಫಲ ಸೌಹಾರ್ದ ಸಹಕಾರಿ ನಿಯಮಿತ ಸಂಘದಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸಂಜೀವ್ ಅಡ್ಯಾರ್ ಅವರು ಅನಿಲ್ಕುಮಾರ್ ಅವರಿಗೆ ಶುಭ ಹಾರೈಸಿದರು. ಉಪಾಧ್ಯಕ್ಷ ಪ್ರೇಮಾನಂದ ಬಿಜೈ ಹಾಗೂ ಇತರ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಅನಿಲ್ಕುಮಾರ್ ಅತ್ತಾವರ ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಮಂಗಳೂರು ಮಹಾನಗರಪಾಲಿಕೆಯ ಮಾಜಿ ಸದಸ್ಯ(ನಾಮನಿರ್ದೇಶಿತ) ಕೂಡ ಆಗಿರುತ್ತಾರೆ. ಅಲ್ಲದೆ ಪಕ್ಷದಲ್ಲಿ ವಿವಿಧ ಪದಾಧಿಕಾರಿಯಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು, ವಿವಿಧ ಸಾಮಾಜಿಕ ಸೇವಾ-ಸಂಸ್ಥೆಗಳ ಪದಾಧಿಕಾರಿ ಆಗಿರುತ್ತಾರೆ.
ಸಂಬಂಧಿತ ಸುದ್ದಿ: ಮುಂಬೈನಲ್ಲಿ ಶ್ರೀನಿವಾಸ ಸಫಲ್ಯ, ಕುಡುಪಿನಲ್ಲಿ ಪ್ರೇಮಾನಂದ ಬಿಜೈ ಅವರಿಗೆ ಸನ್ಮಾನ
ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..
ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ