Sunday, September 22, 2024
spot_img
More

    Latest Posts

    ಗಾಣಿಗ ಯುವ ಬಳಗದಿಂದ ಚಿತ್ರಗಿ ರಾಮಚಂದ್ರ ಮಠದಲ್ಲಿ ಎರಡನೇ ವರ್ಷದ ಕಾರ್ತಿಕ ದೀಪೋತ್ಸವ

    ಬೆಂಗಳೂರು: ಕುಮಟಾ ಗಾಣಿಗ ಬಳಗದ ವತಿಯಿಂದ ಚಿತ್ರಗಿ ರಾಮಚಂದ್ರ ಮಠದಲ್ಲಿ ಎರಡನೇ ವರ್ಷದ ಕಾರ್ತಿಕ ದೀಪೋತ್ಸವ ಹಮ್ಮಿಕೊಳ್ಳಲಾಗಿದ್ದು, ನ. 27ರಂದು ಈ ಸಮಾರಂಭ ನಡೆಯಲಿದೆ.

    ಗಾಣಿಗ ಸಮಾಜದ ಪುರಾತನವಾದ ಚಿತ್ರಗಿಯ ಶ್ರೀ ರಾಮಚಂದ್ರ ಮಠದಲ್ಲಿ ಈ ಸಲದ ದೀಪೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

    ಶನಿವಾರ ಸಂಜೆ 7 ಗಂಟೆಗೆ ನಡೆಯಲಿರುವ ಈ ದೇವತಾ ಕಾರ್ಯಕ್ಕೆ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಾಲ್ಗೊಳ್ಳಬೇಕು. ಆ ಮೂಲಕ  ಶ್ರೀರಾಮಚಂದ್ರ ದೇವರ  ಅನುಗ್ರಹಕ್ಕೆ ಪಾತ್ರರಾಗಬೇಕು ಎಂಬುದಾಗಿ ಕುಮಟಾ ಗಾಣಿಗ ಬಳಗದ ಅಧ್ಯಕ್ಷ ಗಣೇಶ್ ಪ್ರಸಾದ್ ಶೆಟ್ಟಿ ಕೋರಿದ್ದಾರೆ.

    ಈ ಕಾರ್ಯಕ್ರಮಕ್ಕೆ ಬರುವ ಸಮಾಜ ಬಾಂಧವರು ಕೋವಿಡ್ ಮಾರ್ಗಸೂಚಿ ಪಾಲಿಸುವ ಸಲುವಾಗಿ ಮಾಸ್ಕ್ ಧರಿಸಿಕೊಂಡು ಬಂದು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದೂ ಮನವಿ ಮಾಡಿಕೊಂಡಿದ್ದಾರೆ.

    ಸಂಬಂಧಿತ ಸುದ್ದಿ: ವಿಶ್ವನಾಥ್‌ ಭಾಸ್ಕರ್‌ ಅವರಿಂದ ತರಬೇತಾದ ಸತ್ಯವತಿಗೆ ಗೆಲುವು; ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ

    ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ

    ಸಂಬಂಧಿತ ಸುದ್ದಿ: 600 ಕಿ.ಮೀ. ದೂರದಿಂದ ಸೈಕಲ್‌ನಲ್ಲೇ ಬಂದು ಪುನೀತ್‌ ಸಮಾಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!