ಬೆಂಗಳೂರು: ಗಾಣಿಗ ಸಮಾಜಕ್ಕೆ ಸಂಬಂಧಿಸಿದಂತೆ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಬಹಳಷ್ಟು ಕೆಲಸ ಮಾಡಿರುವ ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್, ಗಾಣಿಗ ಸಮುದಾಯದ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ವಿದ್ಯಾಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅದಕ್ಕಾಗಿ ಅರ್ಹರಿಂದ ಅರ್ಜಿಯನ್ನೂ ಈಗಾಗಲೇ ಆಹ್ವಾನಿಸಿದೆ. ಆದರೆ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಸಲು ವಿಧಿಸಲಾಗಿದ್ದ ಕಡೆಯ ದಿನಾಂಕವನ್ನು ಈಗ ವಿಸ್ತರಿಸಲಾಗಿದೆ.
2019-20 ಮತ್ತು 2020-21ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ರ್ಯಾಂಕ್ ಗಳಿಸಿರುವ ಅಥವಾ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿರುವ ಗಾಣಿಗ ಸಮುದಾಯದ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಇಂಜಿನಿಯರಿಂಗ್, ಮೆಡಿಕಲ್, ಆಯುರ್ವೇದ, ಪಿಎಚ್ಡಿ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದವರು ಇದಕ್ಕೆ ಅರ್ಜಿ ಸಲ್ಲಿಸಬಹುದು.
ಅಂದಹಾಗೆ ಇದು ದಕ್ಷಿಣ ಕರ್ನಾಟಕ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ದಕ್ಷಿಣಕನ್ನಡ, ಉತ್ತರಕನ್ನಡ, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಮತ್ತು ಉಡುಪಿ ಜಿಲ್ಲೆಗಳ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗಷ್ಟೇ ಇದು ಅನ್ವಯಿಸುತ್ತದೆ.
ಆಸಕ್ತರು ತಮ್ಮ ಅಂಕಪಟ್ಟಿಯ ಪ್ರತಿಯ ಜೊತೆಗೆ ಜಾತಿ ಪ್ರಮಾಣಪತ್ರ (ಆಕಾಂಕ್ಷಿ ಅಥವಾ ಅವರ ಪೋಷಕರದ್ದು), ಆಧಾರ್ ಕಾರ್ಡ್ ವಿವರ, ವಿದ್ಯಾಭ್ಯಾಸ ಪಡೆದ ಇತ್ತೀಚಿನ ಶೈಕ್ಷಣಿಕ ಸಂಸ್ಥೆಯ ವಿವರಗಳೊಂದಿಗೆ [email protected] ಇಲ್ಲಿಗೆ ಕಳುಹಿಸಿಕೊಡಬೇಕು. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನಾಂಕ ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಕಡೇ ದಿನಾಂಕವನ್ನು ನ. 30ರ ವರೆಗೆ ವಿಸ್ತರಿಸಲಾಗಿದೆ. ನ.30ರ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಟ್ರಸ್ಟ್ ಹೇಳಿದೆ.
ಸಂಬಂಧಿತ ಸುದ್ದಿ: ಎಸ್ಜಿಇಸಿಟಿಯಿಂದ ಮತ್ತೊಂದು ಮಹತ್ಕಾರ್ಯ; ಗಾಣಿಗ ಸಮಾಜದ 19 ಮಹತ್ವಾಕಾಂಕ್ಷಿಗಳಿಗೆ ಯುಪಿಎಸ್ಸಿ/ಕೆಪಿಎಸ್ಸಿ ತರಬೇತಿ
ಸಂಬಂಧಿತ ಸುದ್ದಿ: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಸೇವೆ 12 ಜಿಲ್ಲೆಗಳಿಗೆ ವಿಸ್ತರಣೆ
ಸಂಬಂಧಿತ ಸುದ್ದಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗಾಣಿಗ ಸಮಾಜದ ವಿದ್ಯಾರ್ಥಿಗಳು