ಬೆಂಗಳೂರು: ಅಖಿಲ ಕರ್ನಾಟಕ ಗಾಣಿಗ ಮಹಾಸಭಾ (ರಿ.) ಹೊರತಂದಿರುವ 2022ನೇ ವರ್ಷದ ನೂತನ ದಿನದರ್ಶಿಕೆಯನ್ನು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ದಿನಕರ ಶೆಟ್ಟಿ ಅವರು ಬಿಡುಗಡೆ ಮಾಡಿದರು.
ಬೆಂಗಳೂರಿನ ಶಾಸಕರ ಭವನದಲ್ಲಿ ಅಖಿಲ ಕರ್ನಾಟಕ ಗಾಣಿಗ ಮಹಾಸಭಾದ ಪದಾಧಿಕಾರಿಗಳ ಸಮ್ಮುಖದಲ್ಲಿ ಅವರು ದಿನದರ್ಶಿಕೆಯನ್ನು ಅಧಿಕೃತವಾಗಿ ಅನಾವರಣಗೊಳಿಸಿದರು.
ಗಾಣಿಗ ಸಂಘಟನೆಯ ಚಟುವಟಿಕೆಗಳನ್ನು ಕಂಡು ಸಂತಸಗೊಂಡ ಅವರು, ನಿಮ್ಮೊಡನೆ ನಾನು ಸದಾ ನಾನು ಇರುವುದಾಗಿ ಹೇಳಿದ್ದಲ್ಲದೆ, ಸಮಾಜದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ಅಗತ್ಯ ಸಹಕಾರವನ್ನು ಒದಗಿಸುವ ಭರವಸೆಯನ್ನೂ ನೀಡಿದರು.
ದಿನದರ್ಶಿಕೆ ಬಿಡುಗಡೆಯ ಈ ಸ್ಮರಣೀಯ ಸಂದರ್ಭದಲ್ಲಿ ಅಖಿಲ ಕರ್ನಾಟಕ ಗಾಣಿಗ ಮಹಾಸಭಾ (ರಿ.) ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: ಹೊಸ ವರ್ಷದಲ್ಲಿ ಹೊಸ ಹರ್ಷದೊಂದಿಗೆ ಗಾಣಿಗ ಯುವ ಬಳಗದ ವಿಧ್ಯುಕ್ತ ಉದ್ಘಾಟನೆ
ಸಂಬಂಧಿತ ಸುದ್ದಿ: ಕುಮಟಾದಲ್ಲಿ ವಿಸ್ಟಾಡೋಮ್ ರೈಲನ್ನು ಸ್ವಾಗತಿಸಿದ ಶಾಸಕ ದಿನಕರ ಶೆಟ್ಟಿ
ಸಂಬಂಧಿತ ಸುದ್ದಿ: ನಿಲುಗಡೆ-ಸಂಚಾರ ಸಮಸ್ಯೆ ಬಗ್ಗೆ ಪೊಲೀಸರ ಗಮನ ಸೆಳೆದ ಚಾಮರಾಜಪೇಟೆ ನಿವಾಸಿಗರ ಕ್ಷೇಮಾಭಿವೃದ್ಧಿ ಸಂಘ