Saturday, September 21, 2024
spot_img
More

    Latest Posts

    ಮರಕ್ಕೆ ಕಾರು ಡಿಕ್ಕಿ: ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ಇನ್ನು ಮೂವರಿಗೆ ಗಂಭೀರ ಗಾಯ..

    ಬೆಂಗಳೂರು: ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಹಿರಿಯೂರು ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ಧೃತಿ (5), ಗೀತಾ (30) ಹಾಗೂ ಶಾರದಮ್ಮ (60) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸುಧೀಂದ್ರ (36), ದಯಾನಂದ (66), ನಾಗೇಶ (60) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಧೃತಿ, ಗೀತಾ

    ಮೃತಪಟ್ಟವರು ಹಾಗೂ ಗಾಯಾಳುಗಳು ಕುಂದಾಪುರ ಮೂಲದವರು. ಗಾಣಿಗ ಸಮಾಜದವರಾದ ಇವರು ಭಾನುವಾರ ತಡರಾತ್ರಿ ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಈ ಅಪಘಾತ ಸಂಭವಿಸಿದೆ.

    ಕುಂದಾಪುರದ ಕೋಟೇಶ್ವರದ ಹಳವಳ್ಳಿಯವರಾದ ಇವರು ಬೆಂಗಳೂರಿನ ಕುರುಬರಹಳ್ಳಿಯಲ್ಲಿ ವಾಸವಿದ್ದರು. ನಾಗೇಶಯ್ಯ ಅವರು ಅಡುಗೆ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಂಬಂಧಿತ ಸುದ್ದಿ: ಕೇಂದ್ರ ಸಚಿವರಲ್ಲಿ ಗಾಣಿಗ ನಿಗಮ-ಮಂಡಳಿ ಬೇಡಿಕೆ ಇಟ್ಟ ಮುಖಂಡರು

    ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್‌ಗೆ ನಿರ್ಗಮನ

    ಸಂಬಂಧಿತ ಸುದ್ದಿ: ಥಾಣೆ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ರಜತ ಮಹೋತ್ಸವ; ಗೋಪಾಲಕೃಷ್ಣ ಗಾಣಿಗರಿಂದ ಉದ್ಘಾಟನೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!