ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ನಗರೂರಿನಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಯ ಪಟ್ಟಾಭಿಷೇಕ ಶೀಘ್ರದಲ್ಲೇ ನಡೆಯಲಿದ್ದು, ಆ ಕುರಿತ ರೂಪುರೇಷೆಗಳ ಬಗ್ಗೆ ಫೆ. 27ರ ಭಾನುವಾರ ವಿಶೇಷ ಸಭೆ ನಡೆಯಲಿದೆ.
ವಿಶ್ವ ಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್ (ರಿ.) ಸಂಸ್ಥಾಪಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಬಿ.ಜೆ. ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.
ಭಾನುವಾರ ಬೆಳಗ್ಗೆ 11 ಗಂಟೆಗೆ ಟ್ರಸ್ಟ್ನ ಸಮುದಾಯ ಭವನದಲ್ಲಿ ಸಭೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಬಿ.ಜೆ. ಪುಟ್ಟಸ್ವಾಮಿ ಅವರಿಂದ ಆತಿಥ್ಯ ಭೋಜನವೂ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ರಂಗರಾಜು (9845591161), ಹೇಮಂತ್ (9738116762) ಅವರನ್ನು ಸಂಪರ್ಕಿಸಬಹುದು.
ಸಂಬಂಧಿತ ಸುದ್ದಿ: ಅಧಿವೇಶನದಲ್ಲಿ ಸದ್ದು ಮಾಡಿತು ಗಾಣಿಗ ನಿಗಮ-ಮಂಡಳಿ ವಿಚಾರ
ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?
ಸಂಬಂಧಿತ ಸುದ್ದಿ: ಕೇಂದ್ರ ಸಚಿವರಲ್ಲಿ ಗಾಣಿಗ ನಿಗಮ-ಮಂಡಳಿ ಬೇಡಿಕೆ ಇಟ್ಟ ಮುಖಂಡರು