ಬೆಂಗಳೂರು: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರತಿಷ್ಠಿತ ಹಣಕಾಸು ಸಂಸ್ಥೆಯಲ್ಲೊಂದಾದ ಶ್ರೀ ರಾಮಚಂದ್ರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಾಣಿಗ ಸಮಾಜದವರಾದ ಶ್ರೀಧರ್ ಕೆ. ಶೆಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಇವರು ಕಳೆದ 20 ವರ್ಷಗಳಿಂದ ಶ್ರೀರಾಮಚಂದ್ರ ಪತ್ತಿನ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ ಹಾಗೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಸಂಘದ ಅಧ್ಯಕ್ಷರಾಗಿ ಆಯ್ಕೆ ಆಗಿರುತ್ತಾರೆ. ಅಲ್ಲದೆ ಸಂಘದ ನಿರ್ದೇಶಕರಾಗಿ ಗಾಣಿಗ ಸಮಾಜದವರಾದ ಸತೀಶ್ ಶೆಟ್ಟಿ, ಗಣಪತಿ ಶೆಟ್ಟಿ, ಪದ್ಮಾ ಶೆಟ್ಟಿ, ದಾಮೋದರ ಶೆಟ್ಟಿ, ಆನಂದು ಕೆಕ್ಕಾರ, ಪ್ರಶಾಂತ್ ಶೆಟ್ಟಿ ಅವರು ಆಯ್ಕೆ ಆಗಿದ್ದಾರೆ.
ಶ್ರೀರಾಮಚಂದ್ರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಕುಮಟಾ ಗಾಣಿಗ ಯುವ ಬಳಗವು ಅಭಿನಂದನೆಗಳನ್ನು ಸಲ್ಲಿಸಿ, ನಿಮ್ಮ ಅಧಿಕಾರಾವಧಿಯಲ್ಲಿ ಸಂಘ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದೆ. ಈ ಸಂದರ್ಭದಲ್ಲಿ ಗಾಣಿಗ ಯುವ ಬಳಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..
ಸಂಬಂಧಿತ ಸುದ್ದಿ: ಮುಂಬೈ ಸಾಫಲ್ಯ ಸೇವಾ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ಸಫಲ್ಯ ಅವಿರೋಧ ಪುನರಾಯ್ಕೆ
ಸಂಬಂಧಿತ ಸುದ್ದಿ: ಥಾಣೆ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ರಜತ ಮಹೋತ್ಸವ; ಗೋಪಾಲಕೃಷ್ಣ ಗಾಣಿಗರಿಂದ ಉದ್ಘಾಟನೆ