ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಶಿವಜ್ಯೋತಿ ಗಾಣಿಗರ ಸಂಘದಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀಲಕ್ಷ್ಮೀ ದೇವಿ ದೇವಾಲಯಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ 50,000 ರೂ. ಧನಸಹಾಯ ಬಿಡುಗಡೆಯಾಗಿದೆ. ಈ ಮೊತ್ತದ ಡಿಡಿಯನ್ನು ಶ್ರೀ ಧರ್ಮಸ್ಥಳ ಗಾಮಾಭಿವೃದ್ಧಿ ಸಂಸ್ಥೆಯ ಕೆ.ಆರ್.ಪೇಟೆ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಅವರು ದೇವಾಲಯದ ಸಮಿತಿ ಅಧ್ಯಕ್ಷರಿಗೆ ಹಸ್ತಾಂತರ ಮಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥಾಪಕರಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಮಂಜೂರುಗೊಳಿಸಿದ 50 ಸಾವಿರ ರೂಪಾಯಿಗಳ ಬ್ಯಾಂಕ್ ಡಿಡಿಯನ್ನು ಬೂಕನಕೆರೆ ಶ್ರೀ ಲಕ್ಷ್ಮೀ ದೇವಿ ಗಾಣಿಗರ ಸಂಘದ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ದೇವರಾಜು, ಕಾರ್ಯದರ್ಶಿ ಲೋಹಿತ್ ಅವರಿಗೆ ದೇವಾಲಯದ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರ ಮಾಡಲಾಯಿತು.
ನಮ್ಮ ಧರ್ಮಸ್ಥಳ ಸಂಸ್ಥೆಯಿಂದ ಖಾವಂದರು ಬಿಡುಗಡೆ ಮಾಡಿರುವ 50 ಸಾವಿರ ರೂಪಾಯಿಗಳನ್ನು ದೇವಾಲಯದ ಅಭಿವೃದ್ಧಿಗೆ ನೀಡಲಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಮತಾ ಶೆಟ್ಟಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮೇಲ್ವಿಚಾರಕ ಪ್ರಕಾಶ್, ಸೇವಾ ಪ್ರತಿನಿಧಿ ರೇಖಾ, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು..
ಸಂಬಂಧಿತ ಸುದ್ದಿ: ಎಸ್ಎಸ್ಎಲ್ಸಿಯಲ್ಲಿ ಅತ್ಯಧಿಕ ಅಂಕ; ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸನ್ಮಾನ..
ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ