ಬೆಂಗಳೂರು: ಅಖಿಲ ಭಾರತ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾಗಿದ್ದ ಎಂ.ಪಿ. ಜಯರಾಜ್ ಅವರ ಸೋದರಳಿಯ ಶಂಕರ್ ಇಂದು ನಿಧನರಾದರು. ಎಂ.ಪಿ. ಜಯರಾಜ್ ಅವರ ಸಹೋದರಿ ಎಂ.ಪಿ. ಹೇಮಾವತಿ ಅವರ ಪುತ್ರ ಶಂಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದರು.
ಶಂಕರ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮೃತರಾದರು. ಇಂದು ಸಂಜೆ ಐದು ಗಂಟೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತರು ಬಂಧು-ಬಳಗ, ಗಾಣಿಗ ಸಮಾಜ ಬಾಂಧವರು ಮತ್ತು ಅಪಾರ ಸ್ನೇಹಿತರನ್ನು ಅಗಲಿದ್ದಾರೆ.
ಸಂಬಂಧಿತ ಸುದ್ದಿ: ಆ ದಿನಗಳ ʼಗಾಣಿಗರ ಬಂಧುʼ..!
ಸಂಬಂಧಿತ ಸುದ್ದಿ: ಗಾಣಿಗ ಯುವ ಬಳಗದಿಂದ ಪ್ರತಿಭಾ ಪುರಸ್ಕಾರ, ಸ್ನೇಹಿತರ ದಿನಾಚರಣೆ
ಸಂಬಂಧಿತ ಸುದ್ದಿ: ಗಾಣಿಗ-ಗಾಣಿಗೇರ್ ಬೇರೆಯಲ್ಲ, ಹಿಂದೂ ಲಿಂಗಾಯತ-ಗಾಣಿಗ ಲಿಂಗಾಯತ ಎರಡೂ ಒಂದೇ..