ಬೆಂಗಳೂರು: ʼಅಂಬಿ ನಿಂಗ್ ವಯಸ್ಸಾಯ್ತೋʼ ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿರುವ ಗುರುದತ್ ಗಾಣಿಗ ನಿರ್ಮಾಪಕರೂ ಆಗಿದ್ದಾರೆ. ಅವರು ನಿರ್ಮಾಪಕರಲ್ಲಿ ಒಬ್ಬರಾಗಿರುವ ʼಎಡಗೈಯೇ ಅಪಘಾತಕ್ಕೆ ಕಾರಣ..ʼ ಸಿನಿಮಾಗೆ ಇಂದು ಮುಹೂರ್ತ ನೆರವೇರಿದ್ದು, ಚಿತ್ರೀಕರಣ ಆರಂಭವಾಗಿದೆ.
ʼಗಾಳಿಪಟ-2ʼ ಭರ್ಜರಿ ಯಶಸ್ಸಿನ ಮೂಲಕ ನಟ ದಿಗಂತ್ ಅವರ ಅಭಿನಯದ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ನಾಯಕಿಯಾಗಿ ಧನು ಹರ್ಷ ಅಭಿನಯಿಸುತ್ತಿದ್ದಾರೆ. ಗುರುದತ್ ಗಾಣಿಗ ಹಾಗೂ ಸಮರ್ಥ್ ಬಿ. ಕಡಕೋಳ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಮರ್ಥ್ ಬಿ. ಕಡಕೋಳ್ ಅವರದೇ ನಿರ್ದೇಶನವಿದೆ. ಈ ಚಿತ್ರಕ್ಕೆ ಇಂದು ಬೆಂಗಳೂರಿನ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು.
ಎಡಗೈ ಬಳಸುವವರ ಕಥಾಹಂದರವನ್ನು ಈ ಚಿತ್ರ ಹೊಂದಿದ್ದು, ವಿಶ್ವ ಎಡಚರ ದಿನದಂದು ಈ ಸಿನಿಮಾದ ಪೋಸ್ಟರ್ ಹಾಗೂ ಟೈಟಲ್ ಬಿಡುಗಡೆ ಮಾಡಲಾಗಿತ್ತು. ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲವಾಗಿ ಮಾಡಲಾಗಿರುತ್ತದೆ. ಆದರೆ ಬಹಳ ಕಡಿಮೆ ಸಂಖ್ಯೆಯಲ್ಲಿರುವ ಎಡಗೈ ಬಳಕೆದಾರರಿಗೆ ಇದರಿಂದ ಒಂದಷ್ಟು ತೊಂದರೆಗಳು ಆಗುತ್ತಿವೆ. ಅದರ ಕುರಿತ ಕಥೆ ಇದಾಗಿದ್ದು, ಶೀಘ್ರದಲ್ಲಿ ಚಿತ್ರತಂಡ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಿದೆ.
ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ನ ಈ ಚಿತ್ರಕ್ಕೆ ಸಮರ್ಥ್ ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ. ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಉಳಿದ ಮಾಹಿತಿಗಳನ್ನು ಚಿತ್ರತಂಡ ಒಂದೊಂದಾಗಿ ಮುಂದೆ ಬಹಿರಂಗಪಡಿಸಲಿದೆ.
ಸಂಬಂಧಿತ ಸುದ್ದಿ: ‘ಎಡಗೈ’ಗೆ ಹಣ ಹಾಕಿದ ಗುರುದತ್ ಗಾಣಿಗ; ‘ಅಪಘಾತ’ಕ್ಕೆ ಕಾರಣವನ್ನೂ ಬಿಚ್ಚಿಟ್ಟರು..
ಸಂಬಂಧಿತ ಸುದ್ದಿ: ಗಾಣಿಗ ಸಮುದಾಯದಲ್ಲೊಬ್ಬ ʼಶಾನ್ದಾರ್ʼ ಈಜುಪಟು..
ಸಂಬಂಧಿತ ಸುದ್ದಿ: ಇಲ್ಲಿ ಎಲ್ಲ ಕೋರ್ಸ್ಗಳಿಗೂ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 50 ರಿಯಾಯಿತಿ