ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಉಡುಪಿ ಜಿಲ್ಲೆಯ ಬಾರ್ಕೂರಿನಲ್ಲಿ ಇರುವ ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಬಹಳಷ್ಟು ವರ್ಷಗಳಿಂದ ಸೇವೆ ಮಾಡುತ್ತಿದ್ದ, ರೋಹಿಣಿಯಮ್ಮ ಇಂದು ನಿಧನರಾದರು. ಅವರಿಗೆ ಸುಮಾರು ಎಪ್ಪತ್ತು ವರ್ಷ ವಯಸ್ಸಾಗಿತ್ತು.
ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಎಂದಿನಂತೆ ಕೆಲಸಗಳನ್ನು ಮುಗಿಸಿ ನಿನ್ನೆ ರಾತ್ರಿ ಮನೆಗೆ ತೆರಳಿದ್ದ ಅವರು ಇಂದು ಮುಂಜಾನೆ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದರು. ಶ್ರೀವೇಣುಗೋಪಾಲಕೃಷ್ಣ ಯುವಕ ಸಂಘದ ಕೋಶಾಧಿಕಾರಿ ಶಶಿಧರ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು-ಬಳಗವನ್ನು ಅವರು ಅಗಲಿದರು.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದೇವರು ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ಬಾರ್ಕೂರು ಇದರ ಅಧ್ಯಕ್ಷರು, ಕಾರ್ಯದರ್ಶಿ ಮತ್ತಿತರ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಶ್ರೀವೇಣುಗೋಪಾಲಕೃಷ್ಣ ಎಜುಕೇಷನಲ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ
ಸಂಬಂಧಿತ ಸುದ್ದಿ: ಜನವರಿಯಲ್ಲಿ ನಡೆಯಲಿದೆ ಬೃಹತ್ ಗಾಣಿಗ ಸಮಾವೇಶ; ಬೇಡಿಕೆಗಳ ಕುರಿತು ನಡೆಯಿತು ಪೂರ್ವಭಾವಿ ಸಭೆ