Saturday, September 21, 2024
spot_img
More

    Latest Posts

    ಶಾಲಾ ಮಕ್ಕಳಿಗೆ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘದಿಂದ ಕಿಟ್‌ ವಿತರಣೆ

    ಬೆಂಗಳೂರು: ರಾಜ್ಯಮಟ್ಟದ ಕಾರ್ಮಿಕ ಸಂಘಟನೆಯಾಗಿರುವ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘವು ಹೊಸ ವರ್ಷದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನೆರವಾಗುವ ಕಾರ್ಯಕ್ರಮವೊಂದನ್ನುಇತ್ತೀಚೆಗೆ ಹಮ್ಮಿಕೊಂಡಿತ್ತು.

    ರಾಮನಗರ ಜಿಲ್ಲೆಯಲ್ಲಿ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಬಡ  ಕಾಯಕ/ಕರ್ತವ್ಯ ಯೋಗಿಯ ಮಕ್ಕಳಿಗೆ ಶೈಕ್ಷಣಿಕವಾಗಿ ಅವಶ್ಯವಿರುವ ಕಿಟ್ ವಿತರಣೆ ಮಾಡಲಾಯಿತು. ಅಲ್ಲದೆ ಕಾಯಕ/ಕರ್ತವ್ಯ ಯೋಗಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎಂ.ಸಿ.ಯತೀಶ್ ಕುಮಾರ್, ಕಾರ್ಯದರ್ಶಿಗಳಾದ ಲಕ್ಷ್ಮೀಬಾಯಿ, ಎಲ್.ವೇಣುಗೋಪಾಲ್, ಕಾನೂನು ಕಾರ್ಯದರ್ಶಿ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದು, ಮಕ್ಕಳಿಗೆ ಕಿಟ್ ವಿತರಿಸಿ, ಕಾಯಕ ಯೋಗಿಗಳಿಗೆ ಸನ್ಮಾನಿಸಿದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಪಡುಕೋಣೆ ಸ್ಪೋರ್ಟ್ಸ್‌ ಮ್ಯಾನೇಜ್‌ಮೆಂಟ್‌ನ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ನಲ್ಲಿ ರಿಷಿತಾ-ಲಮ್ಯಾ ರನ್ನರ್‌ ಅಪ್‌

    ಸಂಬಂಧಿತ ಸುದ್ದಿ: ಕರ್ನಾಟಕದಲ್ಲೂ ನಮ್ಮ ಪರಿವಾರ ಇದೆ ಎಂಬ ಭಾವನೆ ಮೂಡಿದೆ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!