ಬೆಂಗಳೂರು: ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠವು ಗಾಣಿಗ ಸಮುದಾಯದ ಮತ್ತು ಅದರ ಉಪ ಪಂಗಡಗಳ ವಧು-ವರರ ಅನ್ವೇಷಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ನಗರೂರು ಗ್ರಾಮದಲ್ಲಿ ಇರುವ ಈ ಮಠದಲ್ಲಿ ಮಾ. 5ರಂದು ಈ ವಧು-ವರರ ಅನ್ವೇಷಣೆ ಕಾರ್ಯಕ್ರಮ ನಡೆಯಲಿದೆ.
ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಪೂರ್ಣಾನಂದಪುರಿ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಮಾ.5ರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಧು-ವರರ ಅನ್ವೇಷಣೆ ಕಾರ್ಯಕ್ರಮ ನಡೆಯಲಿದೆ.
ಸಮಾಜದ ಆಸಕ್ತ ಬಂಧುಗಳು ಇದರಲ್ಲಿ ಭಾಗಿಯಾಗಿ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ. ಅಲ್ಲದೆ ನಿಗದಿಯಾದ ಜೋಡಿಗಳಿಗೆ ಮೇ 15ರಂದು ಸಾಮೂಹಿಕ ವಿವಾಹವನ್ನೂ ಏರ್ಪಡಿಸಲಾಗಿದೆ ಎಂದು ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷ ಬಿ.ರಂಗರಾಜು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9845591161, [email protected]
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಗಾಣಿಗ ಮಹಾಸಭಾದ ಸಮಾರಂಭದಲ್ಲಿ ಮೊಳಗಿತು ಒಗ್ಗಟ್ಟಿನ ಮಂತ್ರ
ಸಂಬಂಧಿತ ಸುದ್ದಿ: ಪುಟ್ಟ ಸ್ವಾಮಿಯನ್ನು ಕೂರಿಸಲು ಹೋಗಿ ತಾವೇ ಪೂರ್ಣ ಸ್ವಾಮಿ ಆಗಿದ್ದೇಕೆ?