ಬೆಂಗಳೂರು: ಕನ್ನಡ ಚಿತ್ರರಂಗದ ಯಶಸ್ವಿ ಸಿನಿಮಾಗಳಲ್ಲಿ ಒಂದಾದ ‘ಕಿರಿಕ್ ಪಾರ್ಟಿ’ಗೆ ಸಹಾಯಕ ನಿರ್ದೇಶಕರಾಗಿದ್ದ ನಾಗೇಂದ್ರ ಗಾಣಿಗ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ʼಅಭಿರಾಮಚಂದ್ರʼಗೆ ಪಿಆರ್ಕೆ ಪ್ರೊಡಕ್ಷನ್ಸ್ನ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅಸ್ತು ಅಂದಿದ್ದಾರೆ. ಅರ್ಥಾತ್, ನಾಗೇಂದ್ರ ಗಾಣಿಗರ ನಿರ್ದೇಶನದ ʼಅಭಿರಾಮಚಂದ್ರʼ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿರುವ ಅಶ್ವಿನಿಯವರು, ಚಿತ್ರ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ʼಅಲೆಯಾಗಿ ಬಾʼ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ ನಾಯಕ ನಟರಾಗಿ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದಾರೆ. ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ‘ಅಭಿರಾಮಚಂದ್ರʼ ಸಿನಿಮಾಗೆ ನಾಗೇಂದ್ರ ಗಾಣಿಗ ನಿರ್ದೇಶನ ಮಾಡುವ ಜೊತೆಗೆ ಕಥೆಯನ್ನೂ ಬರೆದಿದ್ದಾರೆ. ಬಾಲ್ಯದ ಸ್ನೇಹ, ಬಳಿಕದ ಪ್ರೀತಿ ಹಾಗೂ ತ್ರಿಕೋನ ಪ್ರೇಮಕಥೆಯ ಕಥಾಹಂದರ ಇರುವ ಈ ಸಿನಿಮಾಗೆ ಶಿವಾನಿ ರೈ ನಾಯಕಿ. ಸಿದ್ದು ಮೂಲಿಮನಿ, ನಾಟ್ಯರಂಗ, ವೀಣಾ ಸುಂದರ್, ಸುಂದರ್ ವೀಣಾ, ಎಸ್. ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಿಶೇಷವೆಂದರೆ ʼಉಗ್ರಂʼ, ʼಕೆಜಿಎಫ್ʼ ಖ್ಯಾತಿಯ, ಪ್ರಸ್ತುತ ʼಕಬ್ಜʼ ಚಿತ್ರಕ್ಕೂ ಸಂಗೀತ ನಿರ್ದೇಶಕರಾಗಿರುವ ರವಿ ಬಸ್ರೂರು ಈ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ. ಮಾತ್ರವಲ್ಲ, ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ರವಿ ಬಸ್ರೂರು ಅವರ ಪುತ್ರ ಪವನ್ ಕೂಡ ಅಭಿನಯಿಸಿದ್ದಾರೆ.
ಎ.ಜಿ.ಎಸ್ ಎಂಟರ್ಟೈನ್ಮೆಂಟ್, ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಅರ್ಮುಗಂ ಸಂಕಲನ ಈ ಚಿತ್ರಕ್ಕಿದೆ. ಚಿತ್ರೀಕರಣ ಪೂರ್ಣಗೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಸಿನಿಮಾದ ಟೀಸರ್ ಶೀಘ್ರದಲ್ಲೇ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಈ ಸಿನಿಮಾ ಶೂಟಿಂಗ್ ನಡೆದಿದೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ‘ಎಡಗೈ’ಗೆ ಹಣ ಹಾಕಿದ ಗುರುದತ್ ಗಾಣಿಗ; ‘ಅಪಘಾತ’ಕ್ಕೆ ಕಾರಣವನ್ನೂ ಬಿಚ್ಚಿಟ್ಟರು..
ಸಂಬಂಧಿತ ಸುದ್ದಿ: ಯಾರಿವರು.. ಎಲ್ಲಿದ್ದರು ಇಷ್ಟು ದಿನ?; ಇದು ‘ಕ್ಷಯ’ ಹುಟ್ಟುಹಾಕಿದ ಪ್ರಶ್ನೆ!