ಬೆಂಗಳೂರು: ಪ್ರತ್ಯೇಕ ನಿಗಮ-ಮಂಡಳಿಗಾಗಿ ಗಾಣಿಗ ಸಮುದಾಯದ ಬಹುಕಾಲದ ಬೇಡಿಕೆ ಇನ್ನೂ ಈಡೇರದೆ ಹಾಗೇ ಉಳಿದಿದ್ದು, ಅದಕ್ಕಾಗಿ ಗಾಣಿಗ ಸಮಾಜದ ಸಂಘ-ಸಂಸ್ಥೆಗಳು ಆಗಾಗ ಪ್ರತಿಭಟನೆ ನಡೆಸುತ್ತಲೇ ಬಂದಿವೆ. ಇದೀಗ ಆ ನಿಟ್ಟಿನಲ್ಲಿ ಸುವರ್ಣ ಕರ್ನಾಟಕ ಗಾಣಿಗ ಸಭಾ ಕೂಡ ಪ್ರತಿಭಟನೆ ನಡೆಸಿದೆ.
ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 13ರ ಸೋಮವಾರ ಪ್ರತಿಭಟನೆ ನಡೆಸಿದ್ದು, ಗಾಣಿಗ ನಿಗಮ-ಮಂಡಳಿ ಸ್ಥಾಪನೆ ಮಾಡುವಂತೆ ಒತ್ತಾಯಿಸಿದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಇಂಥದ್ದೊಂದು ಹಕ್ಕೊತ್ತಾಯ ಆ ನಿಟ್ಟಿನಲ್ಲಿ ಗಮನ ಸೆಳೆಯುವುದು ಎಂಬ ನಿರೀಕ್ಷೆಯಲ್ಲಿ ಈ ಸಂಘ ಪ್ರತಿಭಟನೆ ನಡೆಸಿದೆ. ಶ್ರೀ ಕಲ್ಲಿನಾಥ ಸ್ವಾಮೀಜಿ ಸೇರಿದಂತೆ ಗಾಣಿಗ ಸಮಾಜದ ನಾನಾ ಭಾಗದ ಮುಖಂಡರು ಇದರಲ್ಲಿ ಭಾಗಿಯಾಗಿದ್ದರು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಮನವಿಗೆ ಸ್ಪಂದಿಸಿದ ಯಕ್ಷಗಾನ ಸಮ್ಮೇಳನ ಸಮಿತಿ; ಸಮ್ಮಾನಕ್ಕೆ ಬಿರ್ತಿ ಬಾಲಕೃಷ್ಣ ಗಾಣಿಗ ಆಯ್ಕೆ
ಸಂಬಂಧಿತ ಸುದ್ದಿ: ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಮಾ.5ರಂದು ವಧು-ವರರ ಅನ್ವೇಷಣೆ