ಬೆಂಗಳೂರು: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಆಯ್ಕೆ ಆಗಿದ್ದು, ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಗಾಣಿಗ ಸಮಾಜದವರಾದ ಗಣೇಶ್ ಬೀಜಾಡಿಯವರು ‘ಐಶ್ವರ್ಯ ಬೀಜಾಡಿ’ ಎಂದೇ ಜನಪ್ರಿಯತೆ ಪಡೆದಿರುವವರು.
ಕುಂದಾಪುರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ್ ಕುಂಭಾಶಿ, ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ನಿರ್ಗಮಿತ ಅಧ್ಯಕ್ಷ ಶಶಿಧರ ಹೆಮ್ಮಾಡಿ ನೂತನ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಿಲ್ಲಾ ಸಂಘದ ರಜತ ಮಹೋತ್ಸವ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಗಾಣಿಗ ನಿಗಮ ಸ್ಥಾಪನೆ: ಸಮುದಾಯದ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ, ಸಿಎಂಗೆ ಅಭಿನಂದನೆ
ಸಂಬಂಧಿತ ಸುದ್ದಿ: ಪವರ್ಲಿಫ್ಟರ್ ಆಗಬೇಕೆನ್ನುವವರಿಗೆ ಇಲ್ಲಿದೆ ಭಾರತದ ಬಲಿಷ್ಠ ಪುರುಷನಿಂದಲೇ ತರಬೇತಿ!