Friday, May 17, 2024
spot_img
More

    Latest Posts

    ಶಿವರಾಜಕುಮಾರ್‌ ಅವರಿಂದ ನಾಗೇಂದ್ರ ಗಾಣಿಗ ನಿರ್ದೇಶನದ ‘ಅಭಿರಾಮಚಂದ್ರ’ ಸಿನಿಮಾ ಟೀಸರ್‌ ಬಿಡುಗಡೆ

    ಬೆಂಗಳೂರು: ನಾಗೇಂದ್ರ ಗಾಣಿಗ ನಿರ್ದೇಶನದ ‘ಅಭಿರಾಮಚಂದ್ರ’ ಸಿನಿಮಾದ ಟೀಸರನ್ನು ಸೆಂಚುರಿ ಸ್ಟಾರ್‌ ಶಿವರಾಜಕುಮಾರ್‌ ಅವರು ಇತ್ತೀಚೆಗೆ ಬಿಡುಗಡೆ ಮಾಡಿದರು. ʼಅಭಿರಾಮಚಂದ್ರ ಟೀಸರ್ ರಿಲೀಸ್ ಮಾಡಿದ್ದು ಬಹಳ ಖುಷಿಯಾಯ್ತು. ನಾಗೇಂದ್ರ ಗಾಣಿಗ ಡೈರೆಕ್ಷನ್ ಮಾಡಿದ್ದಾರೆ. ತುಂಬಾ ಬ್ಯೂಟಿಫುಲ್ ವಿಷುವಲ್ಸ್‌ ಇವೆ. ಕಥೆಯಲ್ಲಿ ಬೇರೆ ಬೇರೆ ತಿರುವು ಕಾಣುತ್ತಿದೆ. ಟೀಸರ್ ನೋಡುವಾಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆನಪಾಯ್ತು. ಆ ಸಿನಿಮಾ ಥರ ಇದೂ ಹಿಟ್ ಆಗಲಿ. ಟೈಟಲ್ ತುಂಬಾ ಪಾಸಿಟಿವ್ ಆಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿʼ ಎಂದು ಅವರು ಹಾರೈಸಿದ್ದಾರೆ.

    ಶಾಲಾ ದಿನಗಳ ಪ್ರೀತಿ, ತುಂಟಾಟ, ಮುಗ್ಧ ಸ್ನೇಹ, ಸುಂದರ ನೋಟ ಇರುವ ʼಅಭಿರಾಮಚಂದ್ರʼ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ʼಕಿರಿಕ್ ಪಾರ್ಟಿʼ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಇವರ ಚೊಚ್ಚಲ ನಿರ್ದೇಶನದ ಈ ಸಿನಿಮಾದಲ್ಲಿ ರಥಕಿರಣ, ಶಿವಾನಿ ರೈ ನಾಯಕ-ನಾಯಕಿಯರಾಗಿದ್ದು,  ಸಿದ್ದು ಮೂಲಿಮನಿ, ನಾಟ್ಯರಂಗ  ಚಿತ್ರದ  ಮುಖ್ಯಭೂಮಿಕೆಯಲ್ಲಿ ಇದ್ದಾರೆ.

    ಸಂಬಂಧಿತ ಸುದ್ದಿ: ʼಅಭಿರಾಮಚಂದ್ರʼರಿಗೆ ಅಸ್ತು ಅಂದ್ರು ಅಶ್ವಿನಿ ಪುನೀತ್‌ ರಾಜಕುಮಾರ್‌

    ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ರವಿ ಬಸ್ರೂರು ಅವರ ಪುತ್ರ ಪವನ್‌ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್ ನಡೆಸಲಾಗಿದೆ.

    ಎ.ಜಿ.ಎಸ್. ಎಂಟರ್‌ಟೇನ್ಮೆಂಟ್‌ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್‌ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಈ  ಚಿತ್ರಕ್ಕಿದೆ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್‌ನ ಕೊನೆಯ ಹಂತದಲ್ಲಿರುವ ʼಅಭಿರಾಮಚಂದ್ರʼ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ‘ಎಡಗೈ’ಗೆ ಹಣ ಹಾಕಿದ ಗುರುದತ್ ಗಾಣಿಗ; ‘ಅಪಘಾತ’ಕ್ಕೆ ಕಾರಣವನ್ನೂ ಬಿಚ್ಚಿಟ್ಟರು..

    ಸಂಬಂಧಿತ ಸುದ್ದಿ: ಬೆಂಗಳೂರು ನಗರ ಜಿಲ್ಲೆ ಸ್ಪೆಷಲ್‌ ಡೆಪ್ಯುಟಿ ಕಮಿಷನರ್‌ ಆಗಿ ಡಾ. ವಾಸಂತಿ ಅಮರ್‌ ನೇಮಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!