ಬೆಂಗಳೂರು: ನಿರ್ದೇಶಕ ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ʼಎಡಗೈಯೇ ಅಪಘಾತಕ್ಕೆ ಕಾರಣʼ ಚಿತ್ರದ ಡಬ್ಬಿಂಗ್ ಶುರುವಾಗಿದೆ.
ನಟ ದಿಗಂತ್ ನಾಯಕರಾಗಿ ಅಭಿನಯಿಸಿರುವ ಈ ಸಿನಿಮಾ ಸದ್ಯ ಮಾತಿನ ಮನೆಯಲ್ಲಿದ್ದು, ಕಲಾವಿದರಾದ ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೋಣಿಸಿದ್ದಾರೆ. ಇವರೆಲ್ಲರ ಡಬ್ಬಿಂಗ್ ಕುರಿತ ಕಿರುವಿಡಿಯೋ ಬಿಡುಗಡೆ ಮಾಡಿರುವ ಚಿತ್ರತಂಡ, ದಿಗಂತ್ ಫೈಲ್ ಮಿಸ್ಸಿಂಗ್ ಎನ್ನುವ ಮೂಲಕ ಚಿತ್ರದ ಕುರಿತ ಕುತೂಹಲ ಹೆಚ್ಚಿಸಲು ಯತ್ನಿಸಿದೆ.
ಸಸ್ಪೆನ್ಸ್ ಥ್ರಿಲ್ಲರ್ ಡಾರ್ಕ್ ಕಾಮಿಡಿ ಜಾನರ್ನ ಈ ಚಿತ್ರಕ್ಕೆ ಸಮರ್ಥ್ ಬಿ. ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಅವರೊಂದಿಗೆ ಗುರುದತ್ತ ಗಾಣಿಗ ಕೂಡ ಈ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರೂ ಆಗಿದ್ದಾರೆ.
ಸಂಬಂಧಿತ ಸುದ್ದಿ: ಎಡಗೈಯೇ ಅಪಘಾತಕ್ಕೆ ಕಾರಣ.. ಇಂದು ಆರಂಭ ಚಿತ್ರೀಕರಣ..
ದಿಗಂತ್ಗೆ ಜೋಡಿಯಾಗಿ ಯುವನಟಿ ಧನು ಹರ್ಷ ನಟಿಸಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ. ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಚಿತ್ರಕ್ಕಿದೆ.
ಪ್ರತಿ ಕೆಲಸಕ್ಕೂ ಎಡಗೈ ಬಳಸುವವರ ಸಮಸ್ಯೆಗಳ ಬಗ್ಗೆಯೇ ಈ ಸಿನಿಮಾದಲ್ಲಿ ತೋರಿಸಲಾಗಿದೆ. ಅವರು ದಿನನಿತ್ಯದ ಜೀವನದಲ್ಲಿ ಎದುರಿಸುವ ಸವಾಲುಗಳ ಕುರಿತಾದ ಕಥಾಹಂದರವಿದ್ದು, ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ
ಸಂಬಂಧಿತ ಸುದ್ದಿ: ಶಿವರಾಜಕುಮಾರ್ ಅವರಿಂದ ನಾಗೇಂದ್ರ ಗಾಣಿಗ ನಿರ್ದೇಶನದ ‘ಅಭಿರಾಮಚಂದ್ರ’ ಸಿನಿಮಾ ಟೀಸರ್ ಬಿಡುಗಡೆ