ಬೆಂಗಳೂರು: ಉಡುಪಿಯ ಅಷ್ಟಮಠಗಳ ಪರ್ಯಾಯೋತ್ಸವಕ್ಕೆ ಗಾಣಿಗ ಸಮಾಜದಿಂದ ಅಕ್ಕಿಮುಡಿಗಳನ್ನು ಸಮರ್ಪಣೆ ಮಾಡಲಾಗಿದೆ. ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮೂಲಕ ಸಮುದಾಯದವರು ಅಕ್ಕಿಮುಡಿಗಳನ್ನು ಸಮರ್ಪಣೆ ಮಾಡಿದರು.
ಉಡುಪಿ ಕೃಷ್ಣನ ಪೂಜಾ ಕೈಂಕರ್ಯದಲ್ಲಿ ಮುಂದಿನ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀಗಳ ಅಕ್ಕಿ ಮಹೂರ್ತ ಕಾರ್ಯಕ್ರಮದಲ್ಲಿ ಅಕ್ಕಿಮುಡಿ ಸಮರ್ಪಣೆ ಮಾಡಲಾಯಿತು. ಈ ಮೂಲಕ ಉಡುಪಿ ಅಷ್ಟಮಠಗಳ ಪರ್ಯಾಯೋತ್ಸವದಲ್ಲಿ ನಮ್ಮ ಸಮಾಜವೂ ಭಾಗಿಯಾದಂತಾಗಿದೆ.
ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ, ಉಪಾಧ್ಯಕ್ಷ ಉದಯಕುಮಾರ್ ಉಡುಪಿ, ಸಮಾಜದ ಗಣ್ಯರಾದ ಚೇರ್ಕಾಡಿ ಶ್ರೀನಿವಾಸ ಗಾಣಿಗ ಹಾಗೂ ಸಮಾಜದ ಹಲವು ಬಾಂಧವರ ಉಪಸ್ಥಿತಿಯಲ್ಲಿ ಈ ಸಮರ್ಪಣೆ ನಡೆಯಿತು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಸೋಮಕ್ಷತ್ರಿಯ ಗಾಣಿಗ ಸಮಾಜದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿವೇತನ
ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ