ಬೆಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ನಾಮನಿರ್ದೇಶಿತ ನಿರ್ದೇಶಕ ವಿಜಯ ಕುಮಾರ್ ಅವರ ಪುತ್ರ ದೀಪಕ್ ಮಂಜೇಶ್ವರ ಜೂನ್ 19ರಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಒಬ್ಬಳು ಪುತ್ರಿ ಮತ್ತು ಬಂಧು ಬಳಗ ಹಾಗೂ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಆಕಸ್ಮಿಕವಾಗಿ ನಮ್ಮನ್ನಗಲಿದ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬವರ್ಗಕ್ಕೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಗೌರವ ಸಲಹೆಗಾರರು, ಪ್ರಧಾನ ವ್ಯವಸ್ಥಾಪಕರು, ಶಾಖಾಧಿಕಾರಿಗಳು, ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿವರ್ಗ, ಪಿಗ್ಮಿ ಸಂಗ್ರಾಹಕರು ಮತ್ತು ಸರಾಫರು ಸಂತಾಪ ಸೂಚಿಸಿದ್ದಾರೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಎಸ್ಜಿಇಸಿಟಿ, ತ್ರಿಶೂಲ ಟ್ರಸ್ಟ್ನಿಂದ ಫೆಮಿನೈನ್ ಹೈಜೀನ್ ಕಾರ್ಯಕ್ರಮ
ಸಂಬಂಧಿತ ಸುದ್ದಿ: ಉಡುಪಿ ಪರ್ಯಾಯೋತ್ಸವಕ್ಕೆ ಗಾಣಿಗ ಸಮಾಜದಿಂದ ಅಕ್ಕಿಮುಡಿ ಸಮರ್ಪಣೆ