ಬೆಂಗಳೂರು: ಗಾಣಿಗ ಸಮಾಜದ ಹಿರಿಯ ಮುಖಂಡರಾಗಿ ಸಮಾಜಕ್ಕೆ ಹಲವು ರೀತಿಯಲ್ಲಿ ಸ್ಪಂದಿಸುತ್ತಿರುವ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರು ಇತ್ತೀಚೆಗೆ ಅಖಿಲ ಕರ್ನಾಟಕ ಗಾಣಿಗರ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಿದರು.
ಬೆಂಗಳೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಂಘದ ರಾಜ್ಯಾಧ್ಯಕ್ಷ ಎಂ.ಆರ್.ರಾಜಶೇಖರ್ ಮತ್ತು ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಈ ವೇಳೆ ಉಪಸ್ಥಿತರಿದ್ದರು.
ಸಮಾಜದ ಏಳಿಗೆಗೆ ಕುರಿತಂತೆ ಮಾತುಕತೆ ನಡೆಸಿ, ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ವಿ.ಆರ್.ಸುದರ್ಶನ್ ಅವರಿಗೆ ಸನ್ಮಾನವನ್ನೂ ಕೈಗೊಳ್ಳಲಾಯಿತು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ರಾಜ್ಯಮಟ್ಟದ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್ಷಿಪ್: ಬಾಲಾರ್ಕದ ವಿಶ್ವನಾಥ್ಗೆ ಚಿನ್ನದ ಪದಕ
ಸಂಬಂಧಿತ ಸುದ್ದಿ: ಉಡುಪಿ ಪರ್ಯಾಯೋತ್ಸವಕ್ಕೆ ಗಾಣಿಗ ಸಮಾಜದಿಂದ ಅಕ್ಕಿಮುಡಿ ಸಮರ್ಪಣೆ