Friday, May 17, 2024
spot_img
More

    Latest Posts

    ಅಖಿಲ ಕರ್ನಾಟಕ ಗಾಣಿಗರ ಸಂಘದ ಕೇಂದ್ರ ಕಚೇರಿಗೆ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಭೇಟಿ

    ಬೆಂಗಳೂರು: ಗಾಣಿಗ ಸಮಾಜದ ಹಿರಿಯ ಮುಖಂಡರಾಗಿ ಸಮಾಜಕ್ಕೆ ಹಲವು ರೀತಿಯಲ್ಲಿ ಸ್ಪಂದಿಸುತ್ತಿರುವ ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್.‌ ಸುದರ್ಶನ್‌ ಅವರು ಇತ್ತೀಚೆಗೆ ಅಖಿಲ ಕರ್ನಾಟಕ ಗಾಣಿಗರ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಿದರು.

    ಬೆಂಗಳೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಂಘದ ರಾಜ್ಯಾಧ್ಯಕ್ಷ ಎಂ.ಆರ್‌.ರಾಜಶೇಖರ್‌ ಮತ್ತು ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಈ ವೇಳೆ ಉಪಸ್ಥಿತರಿದ್ದರು.

    ಅಖಿಲ ಕರ್ನಾಟಕ ಗಾಣಿಗರ ಸಂಘದ ಪದಾಧಿಕಾರಿಗಳು-ಸದಸ್ಯರನ್ನು ಉದ್ದೇಶಿಸಿ ವಿ.ಆರ್.ಸುದರ್ಶನ್‌ ಮಾತು.
    ವಿ.ಆರ್.ಸುದರ್ಶನ್‌ ಅವರ ಜೊತೆ ವಿಚಾರ ವಿನಿಮಯದಲ್ಲಿ ಸಂಘದ ಸದಸ್ಯರು.

    ಸಮಾಜದ ಏಳಿಗೆಗೆ ಕುರಿತಂತೆ ಮಾತುಕತೆ ನಡೆಸಿ, ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ವಿ.ಆರ್.ಸುದರ್ಶನ್‌ ಅವರಿಗೆ ಸನ್ಮಾನವನ್ನೂ ಕೈಗೊಳ್ಳಲಾಯಿತು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ರಾಜ್ಯಮಟ್ಟದ ಸೀನಿಯರ್​ ಪವರ್​ಲಿಫ್ಟಿಂಗ್ ಚಾಂಪಿಯನ್‌ಷಿಪ್: ಬಾಲಾರ್ಕದ ವಿಶ್ವನಾಥ್​ಗೆ ಚಿನ್ನದ ಪದಕ

    ಸಂಬಂಧಿತ ಸುದ್ದಿ: ಉಡುಪಿ ಪರ್ಯಾಯೋತ್ಸವಕ್ಕೆ ಗಾಣಿಗ ಸಮಾಜದಿಂದ ಅಕ್ಕಿಮುಡಿ ಸಮರ್ಪಣೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!