ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸದಾಶಿವ ಗಾಣಿಗ ಬರಿಮಾರು ಆಯ್ಕೆ ಆಗಿದ್ದಾರೆ. ಇವರು ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಸಕ್ರಿಯ ಪದಾಧಿಕಾರಿಯಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿಯೂ ಕ್ರಿಯಾಶೀಲರಾಗಿದ್ದಾರೆ.
ಬರಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದ ಇವರು, ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಬರಿಮಾರು ಸಾರ್ವಜನಿಕ ಗಣೇಶೋತ್ಸವದ ಪೋಷಕ ಸಂಸ್ಥೆ ಶ್ರೀ ಮಹಮ್ಮಾಯಿ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷರಾಗಿದ್ದ ಇವರು, ಬರಿಮಾರು ಭಜನಾ ಮಂಡಳಿ ಸೇವಾ ಟ್ರಸ್ಟ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ರಂಜಿನಿ ಸುಜಿತ್ ಗಾಣಿಗ ಆಯ್ಕೆ ಆಗಿದ್ದಾರೆ. ಬಿಜೆಪಿ ಕಾರ್ಯಕರ್ತೆ ಆಗಿರುವ ಇವರು ಬಂಟ್ವಾಳ ತಾಲೂಕಿನ ನಡುಕೋಡಿ ಎಂಬಲ್ಲಿ ಪ್ರಗತಿಪರ ಕೃಷಿ ಮತ್ತು ಹೈನುಗಾರಿಕೆ ನಡೆಸುತ್ತಿದ್ದು, ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಕೂಡ ತೊಡಗಿಸಿಕೊಂಡಿದ್ದಾರೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಇಬ್ಬರು ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆ
ಸಂಬಂಧಿತ ಸುದ್ದಿ: ಸುಗ್ಗನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅರ್ಪಿತಾ ಹರೀಶ್ ಅವಿರೋಧ ಆಯ್ಕೆ