Sunday, September 22, 2024
spot_img
More

    Latest Posts

    ಮಾಜಿ ಸಭಾಪತಿ ವಿ.ಆರ್. ಸುದರ್ಶನ್‌ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗಾಣಿಗರ ನಿಯೋಗ

    ಬೆಂಗಳೂರು: ವಿಧಾನಪರಿಷತ್‌ ಮಾಜಿ ಸದಸ್ಯ, ಮಾಜಿ ಸಭಾಪತಿ ಕೂಡ ಆಗಿರುವ ವಿ.ಆರ್. ಸುದರ್ಶನ್‌ ಅವರ ನೇತೃತ್ವದಲ್ಲಿ ಗಾಣಿಗ ಸಮುದಾಯದವರ ನಿಯೋಗ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

    ಸೆ. 1ರ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಈ ನಿಯೋಗ ಗಾಣಿಗ ಸಮಾಜದ ಬೇಡಿಕೆಗಳ ಬಗ್ಗೆ ಗಮನ ಸೆಳೆದಿದ್ದಲ್ಲದೆ, ಕೆಲವು ಸಮಸ್ಯೆಗಳ ಪರಿಹಾರದ ಕುರಿತು ಕೂಡ ಮನವಿ ಮಾಡಿಕೊಂಡಿತು.

    ಸಂಬಂಧಿತ ಸುದ್ದಿ: ಸಣ್ಣ ಸಮುದಾಯ ಹಿಂದುಳಿಯಲು ದ್ವಿಮುಖ ನೀತಿ ಕಾರಣ: ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌

    ಗಾಣಿಗ ಸಮಾಜದ ನಾಯಕರಾಗಿರುವ ವಿ.ಆರ್.ಸುದರ್ಶನ್‌ ಗಾಣಿಗ ಸಮಾಜದ ಚಟುವಟಿಕೆಗಳಲ್ಲಿ ಆಗಾಗ ಭಾಗಿ ಆಗುವುದಲ್ಲದೆ, ಸಮಾಜದ ಆಗುಹೋಗುಗಳಿಗೆ ಸ್ಪಂದಿಸಿ, ಸಹಕಾರ-ಸಹಾಯ ಒದಗಿಸುತ್ತ ಬಂದಿದ್ದಾರೆ. ಇದೀಗ ಅವರದೇ ಪಕ್ಷದ ಸರ್ಕಾರ ಇರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಮಾಜದವರಿಗೆ ತಮ್ಮಿಂದಾಗುವ ಸಹಾಯ-ಸಹಕಾರ ಒದಗಿಸಲು ಯತ್ನಿಸಿದ್ದಾರೆ.

    ಸಂಬಂಧಿತ ಸುದ್ದಿ: ಅಖಿಲ ಕರ್ನಾಟಕ ಗಾಣಿಗರ ಸಂಘದ ಕೇಂದ್ರ ಕಚೇರಿಗೆ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಭೇಟಿ

    ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ರಾಜಶೇಖರ್‌ ಮತ್ತು ಇತರ ಪದಾಧಿಕಾರಿಗಳು, ಯತೀಶ್‌ಕುಮಾರ್‌ ಗಾಣಿಗ ಮುಂತಾದವರು ಈ ನಿಯೋಗದಲ್ಲಿದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?

    ಸಂಬಂಧಿತ ಸುದ್ದಿ: ಎಸ್‌ಜಿಇಸಿಟಿಯಿಂದ ಜ್ಞಾನಜ್ಯೋತಿ ಯೋಗ ಅಧ್ಯಯನ ಕೇಂದ್ರ ಆರಂಭ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!