ಬೆಂಗಳೂರು: ನಿವೃತ್ತ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿರಾಜ್ ನಾರಾಯಣ್ ಇಂದು ಉಡುಪಿಯಲ್ಲಿ ನಿಧನರಾದರು. ಕರ್ನಾಟಕ ಅರಣ್ಯ ಇಲಾಖೆಯ ಉದ್ಯೋಗದಲ್ಲಿದ್ದ ಇವರು ಅರಣ್ಯಾಧಿಕಾರಿಯಾಗಿ ರಾಜ್ಯದ ಹಲವೆಡೆ ಕಾರ್ಯನಿರ್ವಹಿಸಿದ್ದರು.
ನಿವೃತ್ತ ಜೀವನ ನಡೆಸುತ್ತಿದ್ದ ಇವರು ಇಂದು ಕೊನೆಯುಸಿರೆಳೆದಿದ್ದು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಗಾಣಿಗ ಸಮಾಜದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇವರು ಸೋಮಕ್ಷತ್ರಿಯ ಗಾಣಿಗ ಸಮಾಜ ಬಾರ್ಕೂರು ಇದರ ಉಪಾಧ್ಯಕ್ಷರಾಗಿದ್ದರು.
ರವಿರಾಜ್ ನಾರಾಯಣ್ ಅವರ ನಿಧನಕ್ಕೆ ಬಾರ್ಕೂರು ಸೋಮಕ್ಷತ್ರಿಯ ಗಾಣಿಗ ಸಮಾಜ, ಸೋಮಕ್ಷತ್ರಿಯ ಗಾಣಿಗ ಸಮಾಜ ಬೆಂಗಳೂರು, ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಹಾಗೂ ಗ್ಲೋಬಲ್ ಗಾಣಿಗ.ಕಾಂ ಮತ್ತು ಸಮಾಜದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರವಿರಾಜ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವರಲ್ಲಿ ಕೋರಿಕೊಂಡಿದ್ದಾರೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?
ಸಂಬಂಧಿತ ಸುದ್ದಿ: ಬಾರ್ಕೂರು ದೇವಸ್ಥಾನದಲ್ಲಿ ಋಗುಪಾಕರ್ಮ, ಯಜ್ಞೋಪವೀತಧಾರಣೆ