ಬೆಂಗಳೂರು: ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗಾಗಿ ಯುವಮಾನಸ ಗಾಣಿಗ ಎಜುಕೇಷನಲ್ ಚಾರಿಟಬಲ್ ಟ್ರಸ್ಟ್ (ರಿ.) ನೀಟ್ ಮತ್ತು ಕೆಸಿಇಟಿ ತರಬೇತಿಯನ್ನು ಉಚಿತವಾಗಿ ಹಮ್ಮಿಕೊಂಡಿದೆ.
ಇಂಜಿನಿಯರ್ ಅಥವಾ ಡಾಕ್ಟರ್ ಆಗಲು ಬಯಸುವ ಗಾಣಿಗ ಸಮುದಾಯದ ಪಿಯುಸಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದು. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶೀಘ್ರವೇ ಈ ತರಬೇತಿ ಆರಂಭಗೊಳ್ಳಲಿದೆ.
ಪ್ರತಿ ರವಿವಾರ ಮತ್ತು ರಜಾದಿನಗಳಲ್ಲಿ ನುರಿತ ಉಪನ್ಯಾಸಕರು ತರಬೇತಿ ನೀಡಲಿದ್ದಾರೆ ಎಂದು ಯುವಮಾನಸ ಗಾಣಿಗ ಎಜುಕೇಷನಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಚ್.ಸುಬ್ಬಯ್ಯ ತಿಳಿಸಿದ್ದಾರೆ.
ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜೆ.ಸುಬ್ರಹ್ಮಣ್ಯ (8971676819), ಸುಭಾಷ್ ಶೆಟ್ಟಿ (9880730434), ಸವಿತಾ ದಿನೇಶ (9481750565) ಅವರನ್ನು ಸಂಪರ್ಕಿಸಬಹುದು.
ಸಂಬಂಧಿತ ಸುದ್ದಿ: ಟೀಮ್ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ
ಸಂಬಂಧಿತ ಸುದ್ದಿ: ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ
ಸಂಬಂಧಿತ ಸುದ್ದಿ: ಯುವ ಮಾನಸ ಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವಿಧ್ಯುಕ್ತ ಉದ್ಘಾಟನೆ