ಬೆಂಗಳೂರು: ಅಖಿಲ ಕರ್ನಾಟಕ ಗಾಣಿಗರ ಸಂಘದ ನೇತೃತ್ವದಲ್ಲಿ ಡಿ.2ರ ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಗಾಣಿಗರ ಬೃಹತ್ ಸಮಾವೇಶಕ್ಕೆ ಆಗಮಿಸುವಂತೆ ನ. 14ರಂದು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನಮಠದ ಪೀಠಾಧಿಪತಿ ಶ್ರೀಪೂರ್ಣಾನಂದಪುರಿ ಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಎಂ.ಆರ್. ರಾಜಶೇಖರ್, ಉಪಾಧ್ಯಕ್ಷ ಬಿ.ವಿ. ನರಸಿಂಹಯ್ಯ, ಸಹಕಾರ ಸಂಘಗಳ ಉಪ ನಿಬಂಧಕ ಎಂ.ಪಿ.ಮಂಜುನಾಥ್, ಆಡಳಿತ ಮಂಡಳಿ ನಿರ್ದೇಶಕ ಕೆ.ವಿ.ರಮೇಶ್, ಸಂಘಟನಾ ಕಾರ್ಯದರ್ಶಿ ಟಿ.ಡಿ.ಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಾಣಿಗರ ಬೃಹತ್ ಸಮಾವೇಶದ ಸಂದರ್ಭದಲ್ಲೇ 50ನೇ ವರ್ಷದ ಸುವರ್ಣ ಮಹೋತ್ಸವ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ, ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದ್ದು, ಶ್ರೀ ಪೂರ್ಣಾನಂದಪುರಿ ಸ್ವಾಮೀಜಿಯವರು ಆಗಮಿಸಿ ಈ ಎಲ್ಲ ಕಾರ್ಯಕ್ರಮಕ್ಕೂ ಆಶೀರ್ವದಿಸಬೇಕು ಎಂದು ಕೋರಿಕೊಳ್ಳಲಾಯಿತು.
ಸಂಬಂಧಿತ ಸುದ್ದಿ: ಟೀಮ್ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ
ಸಂಬಂಧಿತ ಸುದ್ದಿ: ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ
ಸಂಬಂಧಿತ ಸುದ್ದಿ: ಯಕ್ಷಗಾನ ಕಲಾವಿದ ಆಜ್ರಿ ಗೋಪಾಲ ಗಾಣಿಗರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ