ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇದೇ ಶನಿವಾರ ಗಾಣಿಗರ ಬೃಹತ್ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿಯವರಿಂದ ಉದ್ಘಾಟನೆ ಆಗಲಿದೆ. ಅಖಿಲ ಕರ್ನಾಟಕ ಗಾಣಿಗರ ಸಂಘ ತನ್ನ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಗಾಣಿಗರ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಬೆಂಗಳೂರಿನ ಅಂಜನಾಪುರ ವಾರ್ಡ್ ಅವಲಹಳ್ಳಿಯಲ್ಲಿರುವ ಸಂಘದ ಆವರಣದಲ್ಲಿ ಡಿ.2ರ ಶನಿವಾರ ಬೆಳಗ್ಗೆ 9 ಗಂಟೆಗೆ ಈ ಕಾರ್ಯಕ್ರಮ ಆರಂಭ ಆಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆ.9.30ಕ್ಕೆ ಈ ಸಮಾವೇಶವನ್ನು ಉದ್ಘಾಟಿಸುವ ಜೊತೆಗೆ ನೂತನ ಕಟ್ಟಡದ ಬ್ಲಾಕ್ 1 ಮತ್ತು 2ಕ್ಕೂ ಶಂಕುಸ್ಥಾಪನೆ ನಡೆಸಲಿದ್ದಾರೆ. ಶ್ರೀಪೂರ್ಣಾನಂದಪುರಿ ಸ್ವಾಮೀಜಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆಯಲಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ಎಂ.ಆರ್. ರಾಜಶೇಖರ್ ವಹಿಸಲಿದ್ದಾರೆ.
ಸಂಸದ ಡಿ.ಕೆ.ಸುರೇಶ್, ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಶಿವರಾಜ ತಂಗಡಗಿ, ಶಾಸಕರಾದ ದಿನಕರ ಕೆ. ಶೆಟ್ಟಿ, ಎಂ.ಕೃಷ್ಣಪ್ಪ, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ, ಬೆಂಗಳೂರು ನಗರ ಜಿಲ್ಲೆ ವಿಶೇಷ ಜಿಲ್ಲಾಧಿಕಾರಿ ಡಾ.ವಾಸಂತಿ ಅಮರ್, ಮೈಸೂರು ಮಾಜಿ ಮೇಯರ್ ಅನಂತು ಮುಂತಾದವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದ ಸಂಪೂರ್ಣ ವಿವರ
ಸಂಬಂಧಿತ ಸುದ್ದಿ: ಟೀಮ್ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ
ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?
ಸಂಬಂಧಿತ ಸುದ್ದಿ: ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ