ಬೆಂಗಳೂರು: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಚಿತ್ರಗಿಯಲ್ಲಿನ ಶ್ರೀ ರಾಮಚಂದ್ರ ಮಠದಲ್ಲಿ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪೋತ್ಸವ ಈ ಸಲ ಡಿ. 9ರಂದು ವಿಜೃಂಭಣೆಯಿಂದ ನೆರವೇರಲಿದೆ.
ಪುರಾತನ ಪ್ರಸಿದ್ಧ ಚಿತ್ರಗಿಯ ಶ್ರೀ ರಾಮಚಂದ್ರ ಮಠದಲ್ಲಿ ಇದು ಐದನೇ ವರ್ಷದ ಕಾರ್ತಿಕ ದೀಪೋತ್ಸವ ಆಗಿದ್ದು, ಡಿ.9ರ ಶನಿವಾರ ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಕುಮಟಾ ಶ್ರೀ ಮಾರುತಿ ಭಜನಾ ತಂಡದವರಿಂದ ಸುದೀರ್ಘ ಎರಡು ಗಂಟೆಗಳ ಕಾಲ ವಿವಿಧ ಭಜನೆಯ ಮೂಲಕ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ. ಬಳಿಕ ಶ್ರೀ ರಾಮಚಂದ್ರ ದೇವರಲ್ಲಿ ಕಾರ್ತಿಕ ದೀಪೋತ್ಸವ ಪೂಜಾ ಕಾರ್ಯಕ್ರಮ ನಡೆಯಲಿದೆ. ನಂತರ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.
ಈ ಎಲ್ಲ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹಾಗೂ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕುಮಟಾ ಗಾಣಿಗ ಯುವ ಬಳಗ ಕೋರಿದೆ.
ಈ ಕಾರ್ಯಕ್ರಮಕ್ಕೆ ಸ್ವ-ಇಚ್ಛೆಯಿಂದ ಸೇವಾ ಕಾಣಿಕೆ ಹಾಗೂ ವಸ್ತು ರೂಪದಲ್ಲಿ ದೇಣಿಗೆ ನೀಡುವವರು ಬಳಗದ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು.
ಸಂಬಂಧಿತ ಸುದ್ದಿ: ಟೀಮ್ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ
ಸಂಬಂಧಿತ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಗಾಣಿಗರ ಬೃಹತ್ ಸಮಾವೇಶ: ಉದ್ಘಾಟಿಸಲಿದ್ದಾರೆ ಸಿಎಂ
ಸಂಬಂಧಿತ ಸುದ್ದಿ: ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ