Thursday, May 2, 2024
spot_img
More

    Latest Posts

    ಶ್ರೀವೇಣುಗೋಪಾಲಕಷ್ಣ ಸನ್ನಿಧಿಯಲ್ಲಿ ಅದ್ಧೂರಿ ದೀಪೋತ್ಸವ; ಹಾರಾಡಿ ರಾಮ ಗಾಣಿಗ ಪ್ರಶಸ್ತಿ ಪ್ರದಾನ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗರ ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷ ನಡೆಯುವ ಕಾರ್ತಿಕ ದೀಪೋತ್ಸವ ಈ ಸಲ ಡಿ. 5ರಂದು ಅದ್ಧೂರಿಯಾಗಿ ನೆರವೇರಿತು.

    ದೇವಸ್ಥಾನಕ್ಕೆ ಬಂದ ಸಮಾಜಬಾಂಧವರು ಕಾರ್ತಿಕ ದೀಪೋತ್ಸವದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಲ್ಲದೆ, ದೇವಸ್ಥಾನದ ಆವರಣದಲ್ಲಿ ಹಣತೆ-ದೀಪಗಳನ್ನು ಹಚ್ಚುವ ಮೂಲಕ ದೇವಳವನ್ನು ಬೆಳಗಿ ಶ್ರೀಕೃಷ್ಣನ ಕೃಪೆಗೆ ಪಾತ್ರರಾದರು. ಸಮಾಜ ಬಾಂಧವರನೇಕರು ತುಪ್ಪದ ದೀಪ ಸೇವೆಯನ್ನೂ ನೀಡಿದರು.

    ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೇದಮೂರ್ತಿ ಶ್ರೀಕಾಂತ ಸಾಮಗರ ಮುಂದಾಳತ್ವದಲ್ಲಿ ನವಕಲಶ ಪ್ರಧಾನ ಹೋಮ, ಪರಿವಾರ ದೇವರಿಗೆ ಕಲಶಾಭಿಷೇಕ, ರಂಗಪೂಜೆ, ದೀಪೋತ್ಸವ, ಮಹಾಮಂಗಳಾರತಿಗಳು ನೆರವೇರಿದವು. ಮಧ್ಯಾಹ್ನ ಅನ್ನಸಂತರ್ಪಣೆ, ಆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು.

    ಪ್ರಸಿದ್ಧ ಯಕ್ಷಗಾನ ಕಲಾವಿದ ಆಜ್ರಿ ಕಾಕೋಡ್‌ಮಕ್ಕಿ ಮಂಜುನಾಥ ಗಾಣಿಗ ಅವರಿಗೆ ಹಾರಾಡಿ ರಾಮ ಗಾಣಿಗ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಲ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಯಕ್ಷಗಾನ ಕಲಾವಿದ ಆಜ್ರಿ ಗೋಪಾಲ ಗಾಣಿಗ, ಸಮಾಜಸೇವಕರೂ ಆಗಿರುವ ನಿವೃತ್ತ ಪೋಸ್ಟ್‌ ಮಾಸ್ಟರ್‌ ಎಂ. ಲಕ್ಷ್ಮಣ ಗಾಣಿಗ, ರಂಗಭೂಮಿ ಕ್ಷೇತ್ರದ ತಗ್ಗರ್ಸೆ ಗಣೇಶ್‌ ಗಾಣಿಗ, ಕೃಷಿ-ಹೈನುಗಾರಿಕೆ ಕ್ಷೇತ್ರದ ತಗ್ಗರ್ಸೆ ರಂಗ ಗಾಣಿಗ, ಚಿತ್ರಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್‌ ಗಾಣಿಗ, ಮುಖ್ಯಮಂತ್ರಿ ಪದಕ ಪುರಸ್ಕೃತ ಅಗ್ನಿಶಾಮಕ ದಳದ ಅಧಿಕಾರಿ ಬಡಾನಿಡಿಯೂರು ಸುಧೀರ್‌ ಗಾಣಿಗ ಅವರನ್ನು ಸನ್ಮಾನಿಸಲಾಯಿತು.

    ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ, ಉಪಾಧ್ಯಕ್ಷರಾದ ಕೆ.ಉದಯಕುಮಾರ್‌, ಶೇವಧಿ ಸುರೇಶ ಗಾಣಿಗ, ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಸಾಲಿಗ್ರಾಮ, ಕೋಶಾಧಿಕಾರಿ ಗುರುರಾಜ ಕೆಮ್ಮಣ್ಣು, ಸಂಘದ ಮಾಜಿ ಅಧ್ಯಕ್ಷರಾದ ಕೆ.ಗೋಪಾಲ್‌, ವಾಸುದೇವ ಬೈಕಾಡಿ, ಶ್ರೀವೇಣುಗೋಪಾಲಕೃಷ್ಣ ಎಜುಕೇಷನ್‌ ಸೊಸೈಟಿ ಅಧ್ಯಕ್ಷ ರಾಜೇಂದ್ರ ಕೃಷ್ಣ ಗಾಣಿಗ, ಶ್ರೀ ಗೋಪಾಲಕೃಷ್ಣ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಮೇಶ ಗಾಣಿಗ ಕೊಲ್ಲೂರು, ಬೆಂಗಳೂರಿನ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಎಚ್‌.ಟಿ.ನರಸಿಂಹ, ಬೆಂಗಳೂರಿನ ಶ್ರೀ ವೇಣುಗೋಪಾಲಕೃಷ್ಣ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಗೋಪಾಲಕೃಷ್ಣ, ಪತ್ರಕರ್ತ ರಾಜೇಶ್‌ ಗಾಣಿಗ ಅಚ್ಲಾಡಿ ಮುಂತಾದವರು ಉಪಸ್ಥಿತರಿದ್ದರು.

    (ಚಿತ್ರಕೃಪೆ: ಐಶ್ವರ್ಯ ಬೀಜಾಡಿ ಫೋಟೋಗ್ರಫಿ)

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಪಂಚರಾಜ್ಯ ಚುನಾವಣೆ: ಛತ್ತೀಸ್‌ಗಢದಲ್ಲಿ 12 ಗಾಣಿಗ ಅಭ್ಯರ್ಥಿಗಳಿಗೆ ವಿಜಯ; ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಗೆಲುವು

    ಸಂಬಂಧಿತ ಸುದ್ದಿ: ಸಾಮಾಜಿಕ ನ್ಯಾಯ ಕುರಿತು ರಾಜಿ ಇಲ್ಲದ ಕೆಲಸ: ಸಿಎಂ ಸಿದ್ದರಾಮಯ್ಯ ಭರವಸೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!