ಬೆಂಗಳೂರು: ಕುಮಟಾ ಗಾಣಿಗ ಯುವ ಬಳಗವು ಗಾಣಿಗ ಸಮಾಜದ ಪುರಾತನ ದೇವಾಲಯವಾದ ಚಿತ್ರಗಿ ಶ್ರೀ ರಾಮಚಂದ್ರ ಮಠದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳುವ ಕಾರ್ತಿಕ ದೀಪೋತ್ಸವ ಈ ವರ್ಷ ಡಿ.9ರಂದು ಅದ್ಧೂರಿಯಾಗಿ ನೆರವೇರಿತು.
ಇದು ಇಲ್ಲಿನ ಐದನೇ ವರ್ಷದ ದೀಪೋತ್ಸವವಾಗಿದ್ದು, ಶನಿವಾರ ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೀಪೋತ್ಸವ ಆರಂಭಗೊಂಡಿತು. ಕುಮಟಾ ಶ್ರೀ ಮಾರುತಿ ಭಜನಾ ತಂಡದವರಿಂದ ಭಕ್ತಿ ಸಂಗೀತ ಕಾರ್ಯಕ್ರಮವೂ ನಡೆಯಿತು.
ದೇವಸ್ಥಾನವು ಆಕರ್ಷಕ ವಿದ್ಯುದ್ದೀಪಗಳಿಂದ ಅಲಂಕೃತಗೊಂಡಿದ್ದಲ್ಲದೆ, ಸಮಾಜ ಬಾಂಧವರು ದೀಪಗಳನ್ನೂ ಬೆಳಗಿ ದೀಪೋತ್ಸವದಲ್ಲಿ ಭಾಗಿಯಾದರು. ಕುಮಟಾ ಗಾಣಿಗ ಬಳಗದ ಪದಾಧಿಕಾರಿಗಳು, ಸದಸ್ಯರು ಮತ್ತು ಸಮಾಜ ಬಾಂಧವರು ಇದರಲ್ಲಿ ಪಾಲ್ಗೊಂಡು ದೇವರ ಅನುಗ್ರಹಕ್ಕೆ ಪಾತ್ರರಾದರು.
ಸಂಬಂಧಿತ ಸುದ್ದಿ: ಟೀಮ್ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ
ಸಂಬಂಧಿತ ಸುದ್ದಿ: ಪಂಚರಾಜ್ಯ ಚುನಾವಣೆ: ಛತ್ತೀಸ್ಗಢದಲ್ಲಿ 12 ಗಾಣಿಗ ಅಭ್ಯರ್ಥಿಗಳಿಗೆ ವಿಜಯ; ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಗೆಲುವು
ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಕುರಿತು ಸಂಶೋಧನಾ ಪ್ರಬಂಧ; ಮೇಘನಾಗೆ ಡಾಕ್ಟರೇಟ್ ಪದವಿ