Friday, May 17, 2024
spot_img
More

    Latest Posts

    ರಾಜ್ಯಕ್ಕೆ 21ನೇ ರ‌್ಯಾಂಕ್ ಪಡೆದು ಗ್ರೇಡ್‌-1 ಹುದ್ದೆಗೆ ಆಯ್ಕೆಯಾದ ಸಂತೋಷ

    ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮವಾಡಗಿ ಗ್ರಾಮದ ಸಂತೋಷ ಹನಮಗೌಡ ಹೊನ್ನಳ್ಳಿ ಅವರು ಕರ್ನಾಟಕ ಲೋಕ ಸೇವಾ ಆಯೋಗ ನಡೆಸಿರುವ ಪರೀಕ್ಷೆಯಲ್ಲಿ ಪಾಸಾಗಿ ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್‌ ಇಂಜಿನಿಯರ್‌(ಸಿವಿಲ್) ಗ್ರೇಡ್-1 ಹುದ್ದೆಗೆ ರಾಜ್ಯಕ್ಕೆ 21ನೇ ರ‌್ಯಾಂಕ್ ಪಡೆದು ಆಯ್ಕೆ ಆಗಿದ್ದಾರೆ.

    ಇವರು 1ರಿಂದ 10ನೇ ತರಗತಿವರೆಗೆ ಹುನಗುಂದದ ವಿಜಯ ಮಹಾಂತೇಶ ಮಾದರಿಯ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪೂರೈಸಿ, ನಂತರ ಧಾರವಾಡದ ಜೆ.ಎಸ್.ಎಸ್. ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ನಡೆಸಿ, ಹುಬ್ಬಳ್ಳಿಯ ಬಿವಿಬಿಯಲ್ಲಿ ಸಿವಿಲ್ ಪದವಿ ಮುಗಿಸಿದ್ದಾರೆ. ಸಿವಿಲ್‌ನಲ್ಲಿ ಎರಡು ಬಾರಿ ಗೇಟ್ ಪಾಸ್ ಆಗಿರುವ ಇವರು, ದಕ್ಷಿಣಕನ್ನಡ ಜಿಲ್ಲೆಯ ಸುರತ್ಕಲ್‌ ಎನ್‌ಐಟಿಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಕುರಿತು ಸಂಶೋಧನಾ ಪ್ರಬಂಧ; ಮೇಘನಾಗೆ ಡಾಕ್ಟರೇಟ್‌ ಪದವಿ

    ಸಂಬಂಧಿತ ಸುದ್ದಿ: ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!