Thursday, May 2, 2024
spot_img
More

    Latest Posts

    ಗಾಣಿಗ ಮುಖಂಡರಿಗೆ ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್. ಸುದರ್ಶನ್‌ ಅವರಿಂದ ಸನ್ಮಾನ

    ಬೆಂಗಳೂರು: ಅಖಿಲ ಕರ್ನಾಟಕ ಗಾಣಿಗರ ಸಂಘದ ಸುವರ್ಣ ಮಹೋತ್ಸವ ಸಮಾರಂಭ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದು, ಇದೇ ಸಂದರ್ಭದಲ್ಲಿ ಬೃಹತ್‌ ಗಾಣಿಗ ಸಮಾವೇಶ ಕೂಡ ನಡೆದಿತ್ತು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದ್ದರು. ಈ ಸಮಾರಂಭದಲ್ಲಿ ಕರ್ನಾಟಕ ವಿಧಾನಪರಿಷತ್‌ ಮಾಜಿ ಸಭಾಪತಿ, ಗಾಣಿಗ ಸಮುದಾಯದ ನಾಯಕರೂ ಆಗಿರುವ ವಿ.ಆರ್.ಸುದರ್ಶನ್‌ ಕೂಡ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

    ಈ ವೇಳೆ ಮಂಗಳೂರು ತಾಲೂಕು ಗಾಣಿಗ ಸಂಘದ ಅಧ್ಯಕ್ಷ ಕಣ್ಣೂರು ನಾರಾಯಣ ಸಪಲ್ಯ ಅವರನ್ನು ವಿ.ಆರ್.ಸುದರ್ಶನ್ ಸನ್ಮಾನಿಸಿದರು. ಶ್ರೀಪೂರ್ಣಾನಂದಪುರಿ ಸ್ವಾಮೀಜಿ, ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಎಂ.ಆರ್. ರಾಜಶೇಖರ್ ಗಾಣಿಗ, ನಿರ್ದೇಶಕರಾದ ಟಿ.ಡಿ. ಪ್ರಕಾಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಸಾಮಾಜಿಕ ನ್ಯಾಯ ಕುರಿತು ರಾಜಿ ಇಲ್ಲದ ಕೆಲಸ: ಸಿಎಂ ಸಿದ್ದರಾಮಯ್ಯ ಭರವಸೆ

    ಸಂಬಂಧಿತ ಸುದ್ದಿ: ಪಂಚರಾಜ್ಯ ಚುನಾವಣೆ: ಛತ್ತೀಸ್‌ಗಢದಲ್ಲಿ 12 ಗಾಣಿಗ ಅಭ್ಯರ್ಥಿಗಳಿಗೆ ವಿಜಯ; ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಗೆಲುವು

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಕುರಿತು ಸಂಶೋಧನಾ ಪ್ರಬಂಧ; ಮೇಘನಾಗೆ ಡಾಕ್ಟರೇಟ್‌ ಪದವಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!