Thursday, May 2, 2024
spot_img
More

    Latest Posts

    ಉಳಿಯ ಶ್ರೀ ಧರ್ಮರಸರ ಕ್ಷೇತ್ರಕ್ಕೆ ಗಾಣಿಗ ಸಮಾಜದಿಂದ 64 ಸಾವಿರ ರೂ. ದೇಣಿಗೆ

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಬ್ರಹ್ಮಕಲಶೋತ್ಸವಕ್ಕೆ ಮಿಜಾರು- ಎಡಪದವು ಗಾಣಿಗರ ಯಾನೆ ಸಫಲಿಗರ ಸೇವಾ ಸಂಘದ ವ್ಯಾಪ್ತಿಯ ಸಮಾಜಬಾಂಧವರು ಧನಸಹಾಯ ಮಾಡಿದ್ದಾರೆ.

    ಈ ಸಂಘದ ವ್ಯಾಪ್ತಿಯ ಸಮಾಜದ ಮನೆಯವರಿಂದ 64,377 ರೂಪಾಯಿ ಸಂಗ್ರಹವಾಗಿದ್ದು, ಅದನ್ನು ಸಂಘದ ಅಧ್ಯಕ್ಷ ಭಾಸ್ಕರ್ ಎಸ್. ಎಡಪದವು, ಜೊತೆ ಕಾರ್ಯದರ್ಶಿ ಎಂ. ಪ್ರಸಾದ್ ಕುಮಾರ್ ಹಾಗೂ ಅವರ ಪತ್ನಿ ಪ್ರಮೀಳಾ ಅವರ ಮುಖಾಂತರ ದೇವಸ್ಥಾನಕ್ಕೆ ನೀಡಲಾಯಿತು.

    ಭಾಸ್ಕರ್‌, ಪ್ರಸಾದ್‌, ಪ್ರಮೀಳಾ ಅವರು ಈ ಮೊತ್ತವನ್ನು ಧರ್ಮರಸರ ಕ್ಷೇತ್ರದ ಹೊರೆ ಕಾಣಿಕೆ ಸಮಿತಿ ಅಧ್ಯಕ್ಷ ಎಂ. ರಾಮದಾಸ್ ಸೋಮೇಶ್ವರ, ವ್ಯವಸ್ಥಾಪನಾ ಸಮಿತಿಯ  ಯು. ರಮೇಶ್ ಅವರಿಗೆ ಹಸ್ತಾಂತರಿಸುವ ಮೂಲಕ ಶ್ರೀಕ್ಷೇತ್ರಕ್ಕೆ ನೀಡಿದರು.

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ:ಗಾಣಿಗ ಸಮಾಜದ ಕುರಿತು ಸಂಶೋಧನಾ ಪ್ರಬಂಧ; ಮೇಘನಾಗೆ ಡಾಕ್ಟರೇಟ್‌ ಪದವಿ

    ಸಂಬಂಧಿತ ಸುದ್ದಿ:ಶ್ರೀಜ್ಯೋತಿ ಸಮುದಾಯ ಭವನ ಜೀರ್ಣೋದ್ಧಾರಕ್ಕೆ 10 ಲಕ್ಷ ರೂಪಾಯಿ ಧನಸಹಾಯ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!